ಗುರುವಾರ ನಗರದಲ್ಲಿ ಪ್ರತಿಭಟನೆ ಮಾಡಿದ ಪರಿಷತ್ ಕಾರ್ಯಕರ್ತರು ಬದಲಾದ ಶಾಲಾ ಸಮಯಕ್ಕೆ ತಕ್ಕಂತೆ ಹಳ್ಳಿಗಳಿಗೆ ಬಸ್ ಸೌಕರ್ಯ ಕಲ್ಪಿಸಬೇಕು, ಡಿಪ್ಲೊಮಾ, ಎಂಜಿನಿಯರಿಂಗ್, ಸ್ನಾತಕ ಹಾಗೂ ಸ್ನಾತಕೋತ್ತರ ತರಗತಿಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.