‘ರಾಜಕಾರಣದಲ್ಲಿ ಆರೋಪ, ಪ್ರತ್ಯಾರೋಪ ಸಹಜ. ಆದರೆ, ಮಾತನಾಡುವಾಗ ಎಚ್ಚರವಹಿಸಬೇಕು. ಬೇರೆಯವರ ಗೌರವಕ್ಕೆ ಧಕ್ಕೆಯಾಗದ ರೀತಿಯಲ್ಲಿ ವರ್ತಿಸಬೇಕು. ಮಾತಿನ ವೇಗದಲ್ಲಿ ‘ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ’ ಎಂದು ತಪ್ಪಾಗಿ ಮಾತನಾಡಿರುವ ತಂಗಡಗಿಯವರು ಕೂಡಲೇ ಕ್ಷಮೆ ಕೇಳಿ, ಮುಂದಿನ ದಿನಗಳಲ್ಲಿ ಉತ್ತಮ ನಡಾವಳಿಕೆಯೊಂದಿಗೆ ರಾಜಕಾರಣ ಮಾಡಬೇಕು’ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.