<p><strong>ಹುಬ್ಬಳ್ಳಿ</strong>: ‘ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಜನಪ್ರತಿನಿಧಿಗಳಿಂದ ಕೇಳಿ ಪಡೆಯಬೇಕು. ಕೇವಲ ಜೈಕಾರ ಹಾಕಿದರೆ ಸಮಾಜದ ಉದ್ಧಾರ ಸಾಧ್ಯವಿಲ್ಲ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ನಗರದ 63ನೇ ವಾರ್ಡ್ನ ಬಾನಿ ಓಣಿಯಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಂದಾಜು ₹3 ಕೋಟಿ ಅನುದಾನದ ವಿವಿಧ ಕಾಮಗಾರಿಗಳಿಗೆ ಈಚೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಸಮಾಜದ ಏಳ್ಗೆಗೆ ಎಲ್ಲರೂ ಒಗ್ಗಟ್ಟಾಗಿ ಚಿಂತನೆ ಮಾಡಬೇಕು. ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯವಿದ್ದು, ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಸಮುದಾಯ ಭವನ, ಸಾರ್ವಜನಿಕ ಶೌಚಾಲಯ, ಒಳಚರಂಡಿ, ಚರಂಡಿ ಮತ್ತು ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಅವರು, ‘ಹೆಚ್ಚಿನ ಅನುದಾನ ಅಗತ್ಯವಿದ್ದರೆ ಮಂಡಳಿಯಿಂದ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಇಲಿಯಾಸ್ ಮನಿಯಾರ್, ಮುಖಂಡರಾದ ಈಶ್ವರಪ್ಪ ಶಿರಕೋಳ, ಪರಮೇಶ್ವರ ಶಿರಕೋಳ, ಲಕ್ಷ್ಮಣ ಹಂಡೇನವರ, ಮಲ್ಲಪ್ಪ ಶಿರಕೋಳ, ವಿನಾಯಕ ಶಿರಕೋಳ, ಮಂಜುನಾಥ ಜಂಗ್ಲಿ, ಸೂರಿ-ಗಿರಿ ಮಾನಶೆಟ್ಟರ, ರಾಕೇಶ್ ಪಲ್ಲಾಟಿ ಇದ್ದರು.</p>.<p> <strong>ಬಾನಿ ಓಣಿಯಲ್ಲಿ ಜನರಿಗೆ ಸಮಸ್ಯೆ ಆಗದಂತೆ ಭೂಗತ ಕೇಬಲ್ ಅಳವಡಿಕೆಗೆ ಶಾಸಕರು ಸೂಚಿಸಿದ್ದಾರೆ </strong></p><p><strong>-ರುದ್ರೇಶ ಘಾಳಿ ಆಯುಕ್ತ ಹು–ಧಾ ಮಹಾನಗರ ಪಾಲಿಕೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಜನಪ್ರತಿನಿಧಿಗಳಿಂದ ಕೇಳಿ ಪಡೆಯಬೇಕು. ಕೇವಲ ಜೈಕಾರ ಹಾಕಿದರೆ ಸಮಾಜದ ಉದ್ಧಾರ ಸಾಧ್ಯವಿಲ್ಲ’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ನಗರದ 63ನೇ ವಾರ್ಡ್ನ ಬಾನಿ ಓಣಿಯಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಂದಾಜು ₹3 ಕೋಟಿ ಅನುದಾನದ ವಿವಿಧ ಕಾಮಗಾರಿಗಳಿಗೆ ಈಚೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ಸಮಾಜದ ಏಳ್ಗೆಗೆ ಎಲ್ಲರೂ ಒಗ್ಗಟ್ಟಾಗಿ ಚಿಂತನೆ ಮಾಡಬೇಕು. ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯವಿದ್ದು, ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಸಮುದಾಯ ಭವನ, ಸಾರ್ವಜನಿಕ ಶೌಚಾಲಯ, ಒಳಚರಂಡಿ, ಚರಂಡಿ ಮತ್ತು ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಅವರು, ‘ಹೆಚ್ಚಿನ ಅನುದಾನ ಅಗತ್ಯವಿದ್ದರೆ ಮಂಡಳಿಯಿಂದ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಇಲಿಯಾಸ್ ಮನಿಯಾರ್, ಮುಖಂಡರಾದ ಈಶ್ವರಪ್ಪ ಶಿರಕೋಳ, ಪರಮೇಶ್ವರ ಶಿರಕೋಳ, ಲಕ್ಷ್ಮಣ ಹಂಡೇನವರ, ಮಲ್ಲಪ್ಪ ಶಿರಕೋಳ, ವಿನಾಯಕ ಶಿರಕೋಳ, ಮಂಜುನಾಥ ಜಂಗ್ಲಿ, ಸೂರಿ-ಗಿರಿ ಮಾನಶೆಟ್ಟರ, ರಾಕೇಶ್ ಪಲ್ಲಾಟಿ ಇದ್ದರು.</p>.<p> <strong>ಬಾನಿ ಓಣಿಯಲ್ಲಿ ಜನರಿಗೆ ಸಮಸ್ಯೆ ಆಗದಂತೆ ಭೂಗತ ಕೇಬಲ್ ಅಳವಡಿಕೆಗೆ ಶಾಸಕರು ಸೂಚಿಸಿದ್ದಾರೆ </strong></p><p><strong>-ರುದ್ರೇಶ ಘಾಳಿ ಆಯುಕ್ತ ಹು–ಧಾ ಮಹಾನಗರ ಪಾಲಿಕೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>