<p><strong>ಹುಬ್ಬಳ್ಳಿ:</strong> ಪುತ್ತೂರಿನಲ್ಲಿ ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಎಬಿವಿಪಿ ಕಾರ್ಯಕರ್ತರೆನ್ನಲಾದವರ ಮೇಲೆ ಕಠಿಣ ಕ್ರಮ ಕೈಗಳ್ಳಬೇಕು ಎಂದು ಆಗ್ರಹಿಸಿ ನ್ಯಾಷನಲ್ ಸ್ಟೂಡೆಂಟ್ ಆಫ್ ಇಂಡಿಯಾ (ಎನ್ಎಸ್ಯುಐ) ಶನಿವಾರ ನಗರದ ಕಿಮ್ಸ್ ಆವರಣದ ಹೊರಗೆ ಪ್ರತಿಭಟನೆ ನಡೆಸಿತು.</p>.<p>ಸುಶಿಕ್ಷಿತರ ಜಿಲ್ಲೆ ಎನ್ನುವ ಖ್ಯಾತಿಗೆ ಒಳಗಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ವಿಪರ್ಯಾಸ. ಸಂಸ್ಕಾರ, ಸಂಸ್ಕೃತಿ ಎನ್ನುವವರೇ ಇಂತಹ ಹೀನ ಕೃತ್ಯದಲ್ಲಿ ಭಾಗಿಯಾಗುತ್ತಿರುವುದು ದುರಂತ. ಈ ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.</p>.<p>‘ಹಿಂದೂ ಮಕ್ಕಳನ್ನು ಮುಟ್ಟಿದರೆ ಕೈ ಕತ್ತರಿಸಿ ಎಂದು ಹೇಳುತ್ತಿದ್ದ ಸಂಸದ ಅನಂತಕುಮಾರ ಹೆಗಡೆ ಎಲ್ಲಿದ್ದೀಯಪ್ಪಾ?’, ‘ಧಿಕ್ಕಾರ ಧಿಕ್ಕಾರ ಬಿಜೆಪಿಗೆ ಧಿಕ್ಕಾರ’ ಎನ್ನುವ ಬರಹವಿರುವ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರದೀಪ ಹಡಗಲಿ, ರಾಜೇಶ ಚೌಹಾಣ್, ಶ್ರದ್ಧಾ, ಚಿನ್ಮಯ ನಾಯಕ, ರೋಹಿತ್ ಘೋಡಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಪುತ್ತೂರಿನಲ್ಲಿ ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಎಬಿವಿಪಿ ಕಾರ್ಯಕರ್ತರೆನ್ನಲಾದವರ ಮೇಲೆ ಕಠಿಣ ಕ್ರಮ ಕೈಗಳ್ಳಬೇಕು ಎಂದು ಆಗ್ರಹಿಸಿ ನ್ಯಾಷನಲ್ ಸ್ಟೂಡೆಂಟ್ ಆಫ್ ಇಂಡಿಯಾ (ಎನ್ಎಸ್ಯುಐ) ಶನಿವಾರ ನಗರದ ಕಿಮ್ಸ್ ಆವರಣದ ಹೊರಗೆ ಪ್ರತಿಭಟನೆ ನಡೆಸಿತು.</p>.<p>ಸುಶಿಕ್ಷಿತರ ಜಿಲ್ಲೆ ಎನ್ನುವ ಖ್ಯಾತಿಗೆ ಒಳಗಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ವಿಪರ್ಯಾಸ. ಸಂಸ್ಕಾರ, ಸಂಸ್ಕೃತಿ ಎನ್ನುವವರೇ ಇಂತಹ ಹೀನ ಕೃತ್ಯದಲ್ಲಿ ಭಾಗಿಯಾಗುತ್ತಿರುವುದು ದುರಂತ. ಈ ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.</p>.<p>‘ಹಿಂದೂ ಮಕ್ಕಳನ್ನು ಮುಟ್ಟಿದರೆ ಕೈ ಕತ್ತರಿಸಿ ಎಂದು ಹೇಳುತ್ತಿದ್ದ ಸಂಸದ ಅನಂತಕುಮಾರ ಹೆಗಡೆ ಎಲ್ಲಿದ್ದೀಯಪ್ಪಾ?’, ‘ಧಿಕ್ಕಾರ ಧಿಕ್ಕಾರ ಬಿಜೆಪಿಗೆ ಧಿಕ್ಕಾರ’ ಎನ್ನುವ ಬರಹವಿರುವ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರದೀಪ ಹಡಗಲಿ, ರಾಜೇಶ ಚೌಹಾಣ್, ಶ್ರದ್ಧಾ, ಚಿನ್ಮಯ ನಾಯಕ, ರೋಹಿತ್ ಘೋಡಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>