ಸುಶಿಕ್ಷಿತರ ಜಿಲ್ಲೆ ಎನ್ನುವ ಖ್ಯಾತಿಗೆ ಒಳಗಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ವಿಪರ್ಯಾಸ. ಸಂಸ್ಕಾರ, ಸಂಸ್ಕೃತಿ ಎನ್ನುವವರೇ ಇಂತಹ ಹೀನ ಕೃತ್ಯದಲ್ಲಿ ಭಾಗಿಯಾಗುತ್ತಿರುವುದು ದುರಂತ. ಈ ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.