‘ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತಡೆಯೊಡ್ಡುತ್ತಿರುವ ರಾಜ್ಯ ಸರ್ಕಾರ ಹುಬ್ಬಳ್ಳಿ– ಧಾರವಾಡದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ. ಸಿಆರ್ಎಫ್ ಕಾಮಗಾರಿಗಳಿಗೆ ಅನುಮತಿ ನೀಡುವಂತೆ ಹಲವು ಬಾರಿ ಮನವಿ ಮಾಡಿದರೂ, ಪ್ರಯೋಜನಾ ಆಗಲಿಲ್ಲ. ನೀಲಿಜಿನ್ ರಸ್ತೆಗೆ ₹25 ಕೋಟಿ ಮಂಜೂರಾದರೂ ಕಾಮಗಾರಿ ಆರಂಭಿಸಲು ಮನಸ್ಸು ಮಾಡದೆ ನೆಪ ಹೇಳುತ್ತಿದ್ದಾರೆ. ದಿನದ 24 ಗಂಟೆಯೂ ನೀರು ಪೂರೈಸುವ ಯೋಜನೆಗೆ ಕೈಬಿಟ್ಟಿಲ್ಲ ಎಂದು ಸರ್ಕಾರ ಹೇಳುತ್ತಿದೆ, ಆದರೆ ಹಣ ಎಲ್ಲಿದೆ’ ಎಂದು ಅವರು ಪ್ರಶ್ನಿಸಿದರು.