<p><strong>ಧಾರವಾಡ:</strong> ‘ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ (ಐಐಐಟಿ) `ಕ್ವಾಂಟಮ್ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಕಂಪ್ಯೂಟಿಂಗ್' ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಲೋಕಲ್ ಎಕನಾಮಿಕಲ್ ಆಕ್ಸಲರೇಟರ್ ಪ್ರೋಗ್ರಾಂ (ಲೀಪ್) ಯೋಜನೆಯಡಿ ₹18 ಕೋಟಿ ಮಂಜೂರು ಮಾಡಿದೆ’ ಎಂದು ಐಐಐಟಿ ನಿರ್ದೇಶಕ ಮಹದೇವ ಪ್ರಸನ್ನ ತಿಳಿಸಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕ್ವಾಂಟಮ್ ಕಂಪ್ಯೂಟಿಂಗ್ ತಂತ್ರಜ್ಞಾನ ಕೇವಲ ಭವಿಷ್ಯದ ತಂತ್ರಜ್ಞಾನವಲ್ಲ, ಇದು ವೈಜ್ಞಾನಿಕ ಸಂಶೋಧನೆ, ಔಷಧ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಹಣಕಾಸು, ಸೈಬರ್ ಸುರಕ್ಷತೆ, ಕೈಗಾರಿಕೆ ಕ್ಷೇತ್ರಗಳಲ್ಲಿ ಬದಲಾವಣೆ ತರಲು ಮುಖ್ಯ ಪಾತ್ರವಹಿಸುತ್ತದೆ’ ಎಂದರು.</p>.<p>‘ವಿದ್ಯಾರ್ಥಿಗಳಿಗೆ ಮತ್ತು ಸಂಶೋಧಕರಿಗೆ ಕ್ವಾಂಟಮ್ ತಂತ್ರಜ್ಞಾನದ ತರಬೇತಿ ನೀಡುವ ಜತೆ ಉದ್ಯಮ (ಸ್ಟಾರ್ಟ್ಅಪ್) ಮತ್ತು ಶೈಕ್ಷಣಿಕ ವಲಯದಲ್ಲೂ ಮಾನವ ಸಂಪನ್ಮೂಲ ಸೃಷ್ಟಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ’ ಎಂದು ತಿಳಿಸಿದರು.</p>.<p>‘ಸಾಂಪ್ರದಾಯಿಕ ಕಂಪ್ಯೂಟರ್ಗಿಂತ ಕ್ವಾಂಟಮ್ ಕಂಪ್ಯೂಟರ್ ವೇಗವಾಗಿ ಕಾರ್ಯ ನಿರ್ವಹಿಸುತ್ತದೆ. ಆರೋಗ್ಯ ರಕ್ಷಣೆಯಿಂದ ಹಿಡಿದು ವೇಗವರ್ಧಿತ ಔಷಧ ಅನ್ವೇಷಣೆಯ ಮೂಲಕ ಇಂಧನ ಉತ್ಪಾದನೆವರೆಗೆ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿಗೆ ಕಾರಣವಾಗಲಿದೆ’ ಎಂದರು.</p>.<p>‘ಭಾರತವು ವಿಶ್ವಮಟ್ಟದಲ್ಲಿ ಕ್ವಾಂಟಮ್ ಕಂಪ್ಯೂಟಿಂಗ್ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರಲು ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಧಾರವಾಡ ಐಐಐಟಿ ಕೇಂದ್ರ ಅನೇಕ ಕೊಡುಗೆ ನೀಡುತ್ತಿದೆ. ಐಐಐಟಿಯ ಬಿ.ಟೆಕ್ ಕೋರ್ಸ್ನ ವಿದ್ಯಾರ್ಥಿಗಳಿಗೆ ಎರಡು ವರ್ಷದ ಕೋರ್ಸ್ ಉತ್ತರ ಕರ್ನಾಟಕದ ಎಂಜಿನಿಯರಿಂಗ್ ಮತ್ತು ಮೂಲ ವಿಜ್ಞಾನ ವಿದ್ಯಾರ್ಥಿಗಳಿಗೆ 6 ತಿಂಗಳ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಿದೆ’ ಎಂದರು.</p>.<div><blockquote>ಕೇಂದ್ರ ಸರ್ಕಾರವು ರಾಷ್ಟ್ರೀಯ ಕ್ವಾಂಟಮ್ ಮಿಷನ್ ಮೂಲಕ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಮಾಡುತ್ತಿದೆ. ಕೆಲ ವರ್ಷಗಳಲ್ಲಿ ಔಷಧ ಅಭಿವೃದ್ಧಿ ಹಣಕಾಸು ವಿಶ್ಲೇಷಣೆ ಕ್ರಿಪ್ಟೋಗ್ರಫಿ ಕೃತಕ ಬುದ್ಧಿಮತ್ತೆ ಅಂತಹ ಕ್ಷೇತ್ರಗಳಲ್ಲಿ ಕ್ವಾಂಟಮ್ ತಂತ್ರಜ್ಞಾನವು ಬದಲಾವಣೆಗಳನ್ನು ತರಲಿದೆ </blockquote><span class="attribution">–ದೀಪಕ, ಪ್ರಾಧ್ಯಾಪಕ ಐಐಐಟಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಲ್ಲಿ (ಐಐಐಟಿ) `ಕ್ವಾಂಟಮ್ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಕಂಪ್ಯೂಟಿಂಗ್' ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಲೋಕಲ್ ಎಕನಾಮಿಕಲ್ ಆಕ್ಸಲರೇಟರ್ ಪ್ರೋಗ್ರಾಂ (ಲೀಪ್) ಯೋಜನೆಯಡಿ ₹18 ಕೋಟಿ ಮಂಜೂರು ಮಾಡಿದೆ’ ಎಂದು ಐಐಐಟಿ ನಿರ್ದೇಶಕ ಮಹದೇವ ಪ್ರಸನ್ನ ತಿಳಿಸಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕ್ವಾಂಟಮ್ ಕಂಪ್ಯೂಟಿಂಗ್ ತಂತ್ರಜ್ಞಾನ ಕೇವಲ ಭವಿಷ್ಯದ ತಂತ್ರಜ್ಞಾನವಲ್ಲ, ಇದು ವೈಜ್ಞಾನಿಕ ಸಂಶೋಧನೆ, ಔಷಧ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಹಣಕಾಸು, ಸೈಬರ್ ಸುರಕ್ಷತೆ, ಕೈಗಾರಿಕೆ ಕ್ಷೇತ್ರಗಳಲ್ಲಿ ಬದಲಾವಣೆ ತರಲು ಮುಖ್ಯ ಪಾತ್ರವಹಿಸುತ್ತದೆ’ ಎಂದರು.</p>.<p>‘ವಿದ್ಯಾರ್ಥಿಗಳಿಗೆ ಮತ್ತು ಸಂಶೋಧಕರಿಗೆ ಕ್ವಾಂಟಮ್ ತಂತ್ರಜ್ಞಾನದ ತರಬೇತಿ ನೀಡುವ ಜತೆ ಉದ್ಯಮ (ಸ್ಟಾರ್ಟ್ಅಪ್) ಮತ್ತು ಶೈಕ್ಷಣಿಕ ವಲಯದಲ್ಲೂ ಮಾನವ ಸಂಪನ್ಮೂಲ ಸೃಷ್ಟಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ’ ಎಂದು ತಿಳಿಸಿದರು.</p>.<p>‘ಸಾಂಪ್ರದಾಯಿಕ ಕಂಪ್ಯೂಟರ್ಗಿಂತ ಕ್ವಾಂಟಮ್ ಕಂಪ್ಯೂಟರ್ ವೇಗವಾಗಿ ಕಾರ್ಯ ನಿರ್ವಹಿಸುತ್ತದೆ. ಆರೋಗ್ಯ ರಕ್ಷಣೆಯಿಂದ ಹಿಡಿದು ವೇಗವರ್ಧಿತ ಔಷಧ ಅನ್ವೇಷಣೆಯ ಮೂಲಕ ಇಂಧನ ಉತ್ಪಾದನೆವರೆಗೆ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿಗೆ ಕಾರಣವಾಗಲಿದೆ’ ಎಂದರು.</p>.<p>‘ಭಾರತವು ವಿಶ್ವಮಟ್ಟದಲ್ಲಿ ಕ್ವಾಂಟಮ್ ಕಂಪ್ಯೂಟಿಂಗ್ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರಲು ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಧಾರವಾಡ ಐಐಐಟಿ ಕೇಂದ್ರ ಅನೇಕ ಕೊಡುಗೆ ನೀಡುತ್ತಿದೆ. ಐಐಐಟಿಯ ಬಿ.ಟೆಕ್ ಕೋರ್ಸ್ನ ವಿದ್ಯಾರ್ಥಿಗಳಿಗೆ ಎರಡು ವರ್ಷದ ಕೋರ್ಸ್ ಉತ್ತರ ಕರ್ನಾಟಕದ ಎಂಜಿನಿಯರಿಂಗ್ ಮತ್ತು ಮೂಲ ವಿಜ್ಞಾನ ವಿದ್ಯಾರ್ಥಿಗಳಿಗೆ 6 ತಿಂಗಳ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಿದೆ’ ಎಂದರು.</p>.<div><blockquote>ಕೇಂದ್ರ ಸರ್ಕಾರವು ರಾಷ್ಟ್ರೀಯ ಕ್ವಾಂಟಮ್ ಮಿಷನ್ ಮೂಲಕ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಮಾಡುತ್ತಿದೆ. ಕೆಲ ವರ್ಷಗಳಲ್ಲಿ ಔಷಧ ಅಭಿವೃದ್ಧಿ ಹಣಕಾಸು ವಿಶ್ಲೇಷಣೆ ಕ್ರಿಪ್ಟೋಗ್ರಫಿ ಕೃತಕ ಬುದ್ಧಿಮತ್ತೆ ಅಂತಹ ಕ್ಷೇತ್ರಗಳಲ್ಲಿ ಕ್ವಾಂಟಮ್ ತಂತ್ರಜ್ಞಾನವು ಬದಲಾವಣೆಗಳನ್ನು ತರಲಿದೆ </blockquote><span class="attribution">–ದೀಪಕ, ಪ್ರಾಧ್ಯಾಪಕ ಐಐಐಟಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>