<p><strong>ಧಾರವಾಡ</strong>: ‘ಸಂಶೋಧನಾ ವಿದ್ಯಾರ್ಥಿಗಳು ಕ್ವಾಂಟಮ್ ಭೌತವಿಜ್ಞಾನದಲ್ಲಿ ನವ ಸಂಶೋಧನೆ ನಡೆಸಬೇಕು. ಭವಿಷ್ಯದ ಸವಾಲುಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ಬೆಂಗಳೂರು ವಿ.ವಿಯ ವಿಶ್ರಾಂತ ಕುಲಪತಿ ಪ್ರೊ.ಕೆ.ಸಿದ್ದಪ್ಪ ಹೇಳಿದರು.</p>.<p>ಪಿಎಂ ಉಷಾ ಯೋಜನೆ, ಎಂ.ಆರ್.ಗೋರಬಾಳ್ ಫೌಂಡೇಷನ್, ಭೌತಶಾಸ್ತ್ರ ಅಲ್ಯುಮ್ನಿ ಅಸೋಸಿಯೇಷನ್, ಸ್ಪೈ ಸ್ಟೂಡೆಂಟ್ ಚಾಪ್ಟರ್ ಸಹಯೋಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಕ್ವಾಂಟಮ್ ಭೌತಶಾಸ್ತ್ರದ 100 ವರ್ಷಗಳು: ಬೆಳವಣಿಗೆಗಳು ಮತ್ತು ನಾವಿನ್ಯ ಭೌತಿಕತೆಯಲ್ಲಿ ಬಹುಶಿಸ್ತೀಯ ಅನ್ವಯಿಕೆಗಳು’ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕ್ವಾಂಟಮ್ ಭೌತವಿಜ್ಞಾನವು ವೈದ್ಯಕೀಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ‘ಲೇಸರ್ ಲೆಪ್ರೊಸ್ಕೊಪಿ’, ‘ಕ್ವಾಂಟಮ್ ಕಂಪ್ಯೂಟಿಂಗ್ ಟೆಕ್ನಾಲಜಿ’ ಮುನ್ನೆಲೆಗೆ ಬಂದಿವೆ. ಈ ತಂತ್ರಜ್ಞಾನಗಳು ವೈದ್ಯಕೀಯ ಚಿಕಿತ್ಸೆ ಮತ್ತು ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಬಳಕೆಯಾಗುತ್ತಿವೆ’ ಎಂದರು.</p>.<p>ಪ್ರೊ.ಎಸ್.ಉಮಾಪತಿ ‘ವೈದ್ಯಕೀಯ ಚಿಕಿತ್ಸೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಬಳಕೆಯಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಐ ಬಳಕೆ ಮಾಡುವಾಗ ಕಾನೂನಾತ್ಮಕ ಮತ್ತು ನೈತಿಕ ಮೌಲ್ಯಗಳ ಪಾಲನೆ ಅಗತ್ಯ’ ಎಂದು ಹೇಳಿದರು.</p>.<p>ಕರ್ನಾಟಕ ವಿ.ವಿ ಕುಲಪತಿ ಪ್ರೊ.ಎ.ಎಂ.ಖಾನ್ ಅಧ್ಯಕ್ಷತೆ ವಹಿಸಿದ್ದರು. ಜಯಶ್ರೀ ಟೋನಣ್ಣವರ, ಪ್ರೊ. ಆರ್.ಎಫ್. ಭಜಂತ್ರಿ, ಎ.ಎಸ್ ಬೇನಾಳ, ಸುಕನ್ಯಾ ಪಾಟೀಲ ಇದ್ದರು.</p>.<div><blockquote>ಕ್ವಾಂಟಮ್ ಮೆಕ್ಯಾನಿಕ್ಸ್ ಕ್ವಾಂಟಮ್ ಕಂಪ್ಯೂಟಿಂಗ್ ತಂತ್ರಜ್ಞಾನಗಳು ಹೊಸ ವಿಸ್ಮಯವನ್ನು ಸೃಷ್ಟಿಸುವ ತಂತ್ರಜ್ಞಾನಗಳಾಗಿವೆ. ಸಂಶೋಧನಾ ವಿದ್ಯಾರ್ಥಿಗಳು ಹೊಸದನ್ನು ಅನ್ವೇಷಣೆ ಮಾಡಲು ಆಸಕ್ತಿ ವಹಿಸಬೇಕು</blockquote><span class="attribution">-ಪ್ರೊ.ಬಿ.ಜಿ.ಮೂಲಿಮನಿ, ವಿಶ್ರಾಂತ ಕುಲಪತಿ ಗುಲ್ಬರ್ಗಾ ವಿ.ವಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ಸಂಶೋಧನಾ ವಿದ್ಯಾರ್ಥಿಗಳು ಕ್ವಾಂಟಮ್ ಭೌತವಿಜ್ಞಾನದಲ್ಲಿ ನವ ಸಂಶೋಧನೆ ನಡೆಸಬೇಕು. ಭವಿಷ್ಯದ ಸವಾಲುಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ಬೆಂಗಳೂರು ವಿ.ವಿಯ ವಿಶ್ರಾಂತ ಕುಲಪತಿ ಪ್ರೊ.ಕೆ.ಸಿದ್ದಪ್ಪ ಹೇಳಿದರು.</p>.<p>ಪಿಎಂ ಉಷಾ ಯೋಜನೆ, ಎಂ.ಆರ್.ಗೋರಬಾಳ್ ಫೌಂಡೇಷನ್, ಭೌತಶಾಸ್ತ್ರ ಅಲ್ಯುಮ್ನಿ ಅಸೋಸಿಯೇಷನ್, ಸ್ಪೈ ಸ್ಟೂಡೆಂಟ್ ಚಾಪ್ಟರ್ ಸಹಯೋಗದಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಕ್ವಾಂಟಮ್ ಭೌತಶಾಸ್ತ್ರದ 100 ವರ್ಷಗಳು: ಬೆಳವಣಿಗೆಗಳು ಮತ್ತು ನಾವಿನ್ಯ ಭೌತಿಕತೆಯಲ್ಲಿ ಬಹುಶಿಸ್ತೀಯ ಅನ್ವಯಿಕೆಗಳು’ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕ್ವಾಂಟಮ್ ಭೌತವಿಜ್ಞಾನವು ವೈದ್ಯಕೀಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ‘ಲೇಸರ್ ಲೆಪ್ರೊಸ್ಕೊಪಿ’, ‘ಕ್ವಾಂಟಮ್ ಕಂಪ್ಯೂಟಿಂಗ್ ಟೆಕ್ನಾಲಜಿ’ ಮುನ್ನೆಲೆಗೆ ಬಂದಿವೆ. ಈ ತಂತ್ರಜ್ಞಾನಗಳು ವೈದ್ಯಕೀಯ ಚಿಕಿತ್ಸೆ ಮತ್ತು ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಬಳಕೆಯಾಗುತ್ತಿವೆ’ ಎಂದರು.</p>.<p>ಪ್ರೊ.ಎಸ್.ಉಮಾಪತಿ ‘ವೈದ್ಯಕೀಯ ಚಿಕಿತ್ಸೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಬಳಕೆಯಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಐ ಬಳಕೆ ಮಾಡುವಾಗ ಕಾನೂನಾತ್ಮಕ ಮತ್ತು ನೈತಿಕ ಮೌಲ್ಯಗಳ ಪಾಲನೆ ಅಗತ್ಯ’ ಎಂದು ಹೇಳಿದರು.</p>.<p>ಕರ್ನಾಟಕ ವಿ.ವಿ ಕುಲಪತಿ ಪ್ರೊ.ಎ.ಎಂ.ಖಾನ್ ಅಧ್ಯಕ್ಷತೆ ವಹಿಸಿದ್ದರು. ಜಯಶ್ರೀ ಟೋನಣ್ಣವರ, ಪ್ರೊ. ಆರ್.ಎಫ್. ಭಜಂತ್ರಿ, ಎ.ಎಸ್ ಬೇನಾಳ, ಸುಕನ್ಯಾ ಪಾಟೀಲ ಇದ್ದರು.</p>.<div><blockquote>ಕ್ವಾಂಟಮ್ ಮೆಕ್ಯಾನಿಕ್ಸ್ ಕ್ವಾಂಟಮ್ ಕಂಪ್ಯೂಟಿಂಗ್ ತಂತ್ರಜ್ಞಾನಗಳು ಹೊಸ ವಿಸ್ಮಯವನ್ನು ಸೃಷ್ಟಿಸುವ ತಂತ್ರಜ್ಞಾನಗಳಾಗಿವೆ. ಸಂಶೋಧನಾ ವಿದ್ಯಾರ್ಥಿಗಳು ಹೊಸದನ್ನು ಅನ್ವೇಷಣೆ ಮಾಡಲು ಆಸಕ್ತಿ ವಹಿಸಬೇಕು</blockquote><span class="attribution">-ಪ್ರೊ.ಬಿ.ಜಿ.ಮೂಲಿಮನಿ, ವಿಶ್ರಾಂತ ಕುಲಪತಿ ಗುಲ್ಬರ್ಗಾ ವಿ.ವಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>