<p><strong>ಧಾರವಾಡ</strong>: ‘ರಾಹುಲ್ ಗಾಂಧಿ ಅವರು ಚುನಾವಣಾ ‘ಸ್ಟಂಟ್’ ಮಾಡುತ್ತಾರೆ. ಸ್ವಯಂ ಸೇವಾ ಸಂಸ್ಥೆಗಳ (ಎನ್ಜಿಒ) ಮಾತು ಕೇಳಿ ಅವರು ಈ ರೀತಿ ಮಾಡುತ್ತಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಕುಟುಕಿದರು. </p><p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ರಾಹುಲ್ ಅವರು ಮಹದೇವಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತ್ರ ಯಾಕೆ ಆಕ್ಷೇಪ ಎತ್ತಿದ್ದಾರೆ. ಪಕ್ಕದ ಶಿವಾಜಿನಗರ, ಸರ್ವಜ್ಞನಗರ ಕ್ಷೇತ್ರಗಳ ಬಗ್ಗೆ ಯಾಕೆ ಆಕ್ಷೇಪ ಎತ್ತಿಲ್ಲ’ ಎಂದು ಪ್ರಶ್ನಿಸಿದರು.</p><p>‘ರಾಹುಲ್ ಅವರ ಆರೋಪದಲ್ಲಿ ಹುರುಳಿಲ್ಲ. ಇಂಥ ಹುರುಳಿಲ್ಲದ ವಿಷಯಗಳು ಬಹಳ ದಿನ ನಿಲ್ಲಲ್ಲ’ ಎಂದರು. </p><p>‘2024ರಲ್ಲಿ ಲೋಕಸಭೆ ಚುನಾವಣೆ ನಡೆದಾಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಒಬ್ಬರ ಹೆಸರು ಎರಡು, ಮೂರು ಕಡೆ ಇರುವಂಥ ತಪ್ಪುಗಳು ಎಲ್ಲ ಕ್ಷೇತ್ರಗಳಲ್ಲೂ ಇರುತ್ತವೆ. ಇಂಥ ತಪ್ಪುಗಳನ್ನು ಸರಿಪಡಿಸಲು ‘ಆಧಾರ್’ ಜೋಡಣೆಗೆ ಈ ಹಿಂದೆ ಮುಂದಾದಾಗ ಕಾಂಗ್ರೆಸ್ನವರೇ ಸುಪ್ರೀಂ ಕೋರ್ಟ್ ಮೆಟ್ಟಲು ಏರಿ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಹಾರದಲ್ಲಿ ನಕಲಿ ವೋಟು ಸ್ವಚ್ಛ ಮಾಡುವ ಕೆಲಸ ಮಾಡಲು ಮುಂದಾದಾಗ ರಾಹುಲ್ ಗಾಂಧಿ ಅವರೇ ವಿರೊಧ ವ್ಯಕ್ತಪಡಿಸಿದರು’ ಎಂದು ಆಪಾದಿಸಿದರು.</p>.ಲಕ್ಷ ಮತ ಕಳವು: ಮಹದೇವಪುರ ಕ್ಷೇತ್ರದ ದಾಖಲೆ ಬಿಡುಗಡೆ ಮಾಡಿದ ರಾಹುಲ್.ಇದು ಮಾಡು ಇಲ್ಲವೇ ಮಡಿ ಹೋರಾಟ | ಮತ ಕಳವು ತನಿಖೆ ಮಾಡಿ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ‘ರಾಹುಲ್ ಗಾಂಧಿ ಅವರು ಚುನಾವಣಾ ‘ಸ್ಟಂಟ್’ ಮಾಡುತ್ತಾರೆ. ಸ್ವಯಂ ಸೇವಾ ಸಂಸ್ಥೆಗಳ (ಎನ್ಜಿಒ) ಮಾತು ಕೇಳಿ ಅವರು ಈ ರೀತಿ ಮಾಡುತ್ತಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಕುಟುಕಿದರು. </p><p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ರಾಹುಲ್ ಅವರು ಮಹದೇವಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತ್ರ ಯಾಕೆ ಆಕ್ಷೇಪ ಎತ್ತಿದ್ದಾರೆ. ಪಕ್ಕದ ಶಿವಾಜಿನಗರ, ಸರ್ವಜ್ಞನಗರ ಕ್ಷೇತ್ರಗಳ ಬಗ್ಗೆ ಯಾಕೆ ಆಕ್ಷೇಪ ಎತ್ತಿಲ್ಲ’ ಎಂದು ಪ್ರಶ್ನಿಸಿದರು.</p><p>‘ರಾಹುಲ್ ಅವರ ಆರೋಪದಲ್ಲಿ ಹುರುಳಿಲ್ಲ. ಇಂಥ ಹುರುಳಿಲ್ಲದ ವಿಷಯಗಳು ಬಹಳ ದಿನ ನಿಲ್ಲಲ್ಲ’ ಎಂದರು. </p><p>‘2024ರಲ್ಲಿ ಲೋಕಸಭೆ ಚುನಾವಣೆ ನಡೆದಾಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಒಬ್ಬರ ಹೆಸರು ಎರಡು, ಮೂರು ಕಡೆ ಇರುವಂಥ ತಪ್ಪುಗಳು ಎಲ್ಲ ಕ್ಷೇತ್ರಗಳಲ್ಲೂ ಇರುತ್ತವೆ. ಇಂಥ ತಪ್ಪುಗಳನ್ನು ಸರಿಪಡಿಸಲು ‘ಆಧಾರ್’ ಜೋಡಣೆಗೆ ಈ ಹಿಂದೆ ಮುಂದಾದಾಗ ಕಾಂಗ್ರೆಸ್ನವರೇ ಸುಪ್ರೀಂ ಕೋರ್ಟ್ ಮೆಟ್ಟಲು ಏರಿ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಹಾರದಲ್ಲಿ ನಕಲಿ ವೋಟು ಸ್ವಚ್ಛ ಮಾಡುವ ಕೆಲಸ ಮಾಡಲು ಮುಂದಾದಾಗ ರಾಹುಲ್ ಗಾಂಧಿ ಅವರೇ ವಿರೊಧ ವ್ಯಕ್ತಪಡಿಸಿದರು’ ಎಂದು ಆಪಾದಿಸಿದರು.</p>.ಲಕ್ಷ ಮತ ಕಳವು: ಮಹದೇವಪುರ ಕ್ಷೇತ್ರದ ದಾಖಲೆ ಬಿಡುಗಡೆ ಮಾಡಿದ ರಾಹುಲ್.ಇದು ಮಾಡು ಇಲ್ಲವೇ ಮಡಿ ಹೋರಾಟ | ಮತ ಕಳವು ತನಿಖೆ ಮಾಡಿ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>