<p><strong>ಧಾರವಾಡ:</strong> ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಹೆಚ್ಚಿಸಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಎಸ್ಯುಸಿಐ) ಜಿಲ್ಲಾ ಸಮಿತಿಯವರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ರೈಲು ನಿಲ್ದಾಣದ ಎದುರು ಸಮಾವೇಶಗೊಂಡ ಪ್ರತಿಭಟನಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈಲು ನಿಲ್ದಾಣ ಅಧಿಕಾರಿಯ ಮೂಲಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ್ ಜಡಗನ್ನವರ ಮಾತನಾಡಿ, ‘ಕೇಂದ್ರ ಸರ್ಕಾರವು ಸಿಬ್ಬಂದಿ ವೆಚ್ಚದ ಆರ್ಥಿಕ ಹೊರೆಯನ್ನು ಪೂರೈಸುವ ಕುಂಟು ನೆಪವೊಡ್ಡಿ, ರೈಲು ಪ್ರಯಾಣದರವನ್ನು ಹೆಚ್ಚಿಸಿದೆ. ಇದನ್ನು ಕೂಡಲೇ ಕೈಬಿಡಬೇಕು’ ಎಂದು ಒತ್ತಾಯಿಸಿದರು.</p>.<p>'ಅಸ್ತಿತ್ವದಲ್ಲಿರುವ ಪ್ರಯಾಣ ವೆಚ್ಚವನ್ನು ಕಡಿಮೆ ಮಾಡಬೇಕು. ಪ್ರಯಾಣಿಕರ ಸುರಕ್ಷತೆ, ಸಮಯಪಾಲನೆಗೆ ಆದತ್ಯ ನೀಡಬೇಕು. ಅಗತ್ಯ ಸೌಲಭ್ಯಗಳನ್ನು ಹೆಚ್ಚಿಸಿ ರೈಲು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.</p>.<p>ಎಸ್ಯುಸಿಐ ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ್ ಬಡಿಗೇರ, ತಾಯಿದಾಸ್ ಎಂ.ಬಿ, ದೀಪಾ ಧಾರವಾಡ, ಶರಣು ಗೋನವರ, ಮಧುಲತಾ ಗೌಡರ್, ಭವಾನಿ ಶಂಕರ್ ಗೌಡರ, ಗಂಗಾ ಕೊಕರೇ, ದೇವಮ್ಮ, ಶಶಿಕಲಾ, ಸಿಂಧು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಹೆಚ್ಚಿಸಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಎಸ್ಯುಸಿಐ) ಜಿಲ್ಲಾ ಸಮಿತಿಯವರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ರೈಲು ನಿಲ್ದಾಣದ ಎದುರು ಸಮಾವೇಶಗೊಂಡ ಪ್ರತಿಭಟನಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈಲು ನಿಲ್ದಾಣ ಅಧಿಕಾರಿಯ ಮೂಲಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ್ ಜಡಗನ್ನವರ ಮಾತನಾಡಿ, ‘ಕೇಂದ್ರ ಸರ್ಕಾರವು ಸಿಬ್ಬಂದಿ ವೆಚ್ಚದ ಆರ್ಥಿಕ ಹೊರೆಯನ್ನು ಪೂರೈಸುವ ಕುಂಟು ನೆಪವೊಡ್ಡಿ, ರೈಲು ಪ್ರಯಾಣದರವನ್ನು ಹೆಚ್ಚಿಸಿದೆ. ಇದನ್ನು ಕೂಡಲೇ ಕೈಬಿಡಬೇಕು’ ಎಂದು ಒತ್ತಾಯಿಸಿದರು.</p>.<p>'ಅಸ್ತಿತ್ವದಲ್ಲಿರುವ ಪ್ರಯಾಣ ವೆಚ್ಚವನ್ನು ಕಡಿಮೆ ಮಾಡಬೇಕು. ಪ್ರಯಾಣಿಕರ ಸುರಕ್ಷತೆ, ಸಮಯಪಾಲನೆಗೆ ಆದತ್ಯ ನೀಡಬೇಕು. ಅಗತ್ಯ ಸೌಲಭ್ಯಗಳನ್ನು ಹೆಚ್ಚಿಸಿ ರೈಲು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.</p>.<p>ಎಸ್ಯುಸಿಐ ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ್ ಬಡಿಗೇರ, ತಾಯಿದಾಸ್ ಎಂ.ಬಿ, ದೀಪಾ ಧಾರವಾಡ, ಶರಣು ಗೋನವರ, ಮಧುಲತಾ ಗೌಡರ್, ಭವಾನಿ ಶಂಕರ್ ಗೌಡರ, ಗಂಗಾ ಕೊಕರೇ, ದೇವಮ್ಮ, ಶಶಿಕಲಾ, ಸಿಂಧು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>