<p><strong>ಹುಬ್ಬಳ್ಳಿ/ದಾಂಡೇಲಿ</strong>: ‘ರೈಲ್ವೆ ಇಲಾಖೆಯ ನೇಮಕಾತಿ ಹಾಗೂ ಇಲಾಖಾ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲೂ ಬರೆಯಲು ಅವಕಾಶ ಕಲ್ಪಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ.</p>.<p>‘ಪ್ರಾದೇಶಿಕ ಭಾಷೆಗಳಿಗೆ ಯೋಗ್ಯ ಸ್ಥಾನಮಾನ ಮತ್ತು ಗೌರವ ಒದಗಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ರೈಲ್ವೆ ನೇಮಕಾತಿ ಹಾಗೂ ಇಲಾಖಾ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ ನಿರ್ಲಕ್ಷ್ಯ ವಹಿಸುತ್ತಿರುವುದು ಕನ್ನಡಿಗರಿಗೆ ಬೇಸರ ಮತ್ತು ಆಕ್ರೋಶ ಮೂಡಿಸಿದೆ’ ಎಂದು ತಿಳಿಸಿದ್ದಾರೆ.</p>.<p>ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ‘ರೈಲ್ವೆ ಇಲಾಖೆಯಲ್ಲಿ ಹುದ್ದೆಗಳ ಭರ್ತಿ, ಬಡ್ತಿಗೆ ನಡೆಸುವ ಪರೀಕ್ಷೆಯನ್ನು ಕನ್ನಡದಲ್ಲೂ ನಡೆಸಲು ಪ್ರಯತ್ನ ನಡೆದಿದೆ. ಆದರೆ, ಕೆಲ ಸ್ವಲ್ಪ ಕಾಲ ಬೇಕಾಗಬಹುದು. ‘ರೈಲ್ವೆ ಮಂಡಳಿ ಪರೀಕ್ಷೆಯ ಬದಲಾವಣೆಗಳತ್ತ ಚಿಂತನೆ ನಡೆಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ/ದಾಂಡೇಲಿ</strong>: ‘ರೈಲ್ವೆ ಇಲಾಖೆಯ ನೇಮಕಾತಿ ಹಾಗೂ ಇಲಾಖಾ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲೂ ಬರೆಯಲು ಅವಕಾಶ ಕಲ್ಪಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ.</p>.<p>‘ಪ್ರಾದೇಶಿಕ ಭಾಷೆಗಳಿಗೆ ಯೋಗ್ಯ ಸ್ಥಾನಮಾನ ಮತ್ತು ಗೌರವ ಒದಗಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ರೈಲ್ವೆ ನೇಮಕಾತಿ ಹಾಗೂ ಇಲಾಖಾ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ ನಿರ್ಲಕ್ಷ್ಯ ವಹಿಸುತ್ತಿರುವುದು ಕನ್ನಡಿಗರಿಗೆ ಬೇಸರ ಮತ್ತು ಆಕ್ರೋಶ ಮೂಡಿಸಿದೆ’ ಎಂದು ತಿಳಿಸಿದ್ದಾರೆ.</p>.<p>ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ‘ರೈಲ್ವೆ ಇಲಾಖೆಯಲ್ಲಿ ಹುದ್ದೆಗಳ ಭರ್ತಿ, ಬಡ್ತಿಗೆ ನಡೆಸುವ ಪರೀಕ್ಷೆಯನ್ನು ಕನ್ನಡದಲ್ಲೂ ನಡೆಸಲು ಪ್ರಯತ್ನ ನಡೆದಿದೆ. ಆದರೆ, ಕೆಲ ಸ್ವಲ್ಪ ಕಾಲ ಬೇಕಾಗಬಹುದು. ‘ರೈಲ್ವೆ ಮಂಡಳಿ ಪರೀಕ್ಷೆಯ ಬದಲಾವಣೆಗಳತ್ತ ಚಿಂತನೆ ನಡೆಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>