<p>ಹುಬ್ಬಳ್ಳಿ: ನಗರದಲ್ಲಿ ಬುಧವಾರ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿಯಿತು. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆಯಿತು. ಕಳೆದ ಎರಡು ದಿನಗಳಿಂದ ನಗರದಲ್ಲಿ ಹೆಚ್ಚು ಸೆಕೆ ಇತ್ತು. </p>.<p>ಸಂಜೆ ದಿಢೀರ್ ಮಳೆ ಬಂದಿದ್ದರಿಂದ ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು. ಬೈಕ್ ಸವಾರರು, ವಿದ್ಯಾರ್ಥಿಗಳು ಅಂಗಡಿ ಬಳಿ, ಮೇಲ್ಸೇತುವೆ ಕೆಳಗೆ ನಿಂತು ಆಶ್ರಯ ಪಡೆದರು. ಕೆಲವು ಕಡೆ ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ಹರಿಯಿತು.</p>.<p>ಮಳೆಯಿಂದಾಗಿ ಬಿಆರ್ಟಿಎಸ್ ಮಾರ್ಗ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ಸಂಗ್ರಹವಾಗಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು.</p>.<p>ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಚನ್ನಮ್ಮ ವೃತ್ತದ ಸುತ್ತಲಿನ ರಸ್ತೆಗಳು, ವಿದ್ಯಾನಗರ, ಹೊಸೂರು ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ವಾಹನ ದಟ್ಟಣೆ ಉಂಟಾಗಿತ್ತು. ಗುಡುಗು, ಸಿಡಿಲಿನಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.</p>.<p>ಇಳೆಗೆ ತಂಪೆರೆದ ಮಳೆ</p>.<p>ಧಾರವಾಡ: ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಬುಧವಾರ ಮಳೆ ಸುರಿಯಿತು. ಗುಡುಗು, ಮಿಂಚಿನ ಆರ್ಭಟ ಇತ್ತು.</p>.<p>ಸಂಜೆ ಶುರುವಾದ ಮಳೆ ಸುಮಾರು 10 ನಿಮಿಷ ರಭಸವಾಗಿ ಸುರಿದು ನಂತರ ಸಾಧಾರಣವಾಗಿ ಸುರಿಯಿತು. ಕೆಲವೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು. ಬಿಸಿಲಿನಿಂದ ಕಾದಿದ್ದ ಇಳೆಗೆ ತಂಪೆರೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ನಗರದಲ್ಲಿ ಬುಧವಾರ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿಯಿತು. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆಯಿತು. ಕಳೆದ ಎರಡು ದಿನಗಳಿಂದ ನಗರದಲ್ಲಿ ಹೆಚ್ಚು ಸೆಕೆ ಇತ್ತು. </p>.<p>ಸಂಜೆ ದಿಢೀರ್ ಮಳೆ ಬಂದಿದ್ದರಿಂದ ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು. ಬೈಕ್ ಸವಾರರು, ವಿದ್ಯಾರ್ಥಿಗಳು ಅಂಗಡಿ ಬಳಿ, ಮೇಲ್ಸೇತುವೆ ಕೆಳಗೆ ನಿಂತು ಆಶ್ರಯ ಪಡೆದರು. ಕೆಲವು ಕಡೆ ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ಹರಿಯಿತು.</p>.<p>ಮಳೆಯಿಂದಾಗಿ ಬಿಆರ್ಟಿಎಸ್ ಮಾರ್ಗ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ಸಂಗ್ರಹವಾಗಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು.</p>.<p>ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಚನ್ನಮ್ಮ ವೃತ್ತದ ಸುತ್ತಲಿನ ರಸ್ತೆಗಳು, ವಿದ್ಯಾನಗರ, ಹೊಸೂರು ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ವಾಹನ ದಟ್ಟಣೆ ಉಂಟಾಗಿತ್ತು. ಗುಡುಗು, ಸಿಡಿಲಿನಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.</p>.<p>ಇಳೆಗೆ ತಂಪೆರೆದ ಮಳೆ</p>.<p>ಧಾರವಾಡ: ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಬುಧವಾರ ಮಳೆ ಸುರಿಯಿತು. ಗುಡುಗು, ಮಿಂಚಿನ ಆರ್ಭಟ ಇತ್ತು.</p>.<p>ಸಂಜೆ ಶುರುವಾದ ಮಳೆ ಸುಮಾರು 10 ನಿಮಿಷ ರಭಸವಾಗಿ ಸುರಿದು ನಂತರ ಸಾಧಾರಣವಾಗಿ ಸುರಿಯಿತು. ಕೆಲವೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು. ಬಿಸಿಲಿನಿಂದ ಕಾದಿದ್ದ ಇಳೆಗೆ ತಂಪೆರೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>