<p><strong>ಧಾರವಾಡ: </strong>ಜಿಲ್ಲೆಯ ಕೆಲವೆಡೆ ಮಂಗಳವಾರ ಮಧ್ಯಾಹ್ನದಿಂದ ಸಾಧಾರಣ ಮಳೆ ಸುರಿಯಿತು. ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯದ ಹವಾಮಾನ ವಿಭಾಗ ತಿಳಿಸಿದೆ.</p>.<p>ಜಿಲ್ಲೆಯಾದ್ಯಂತ ಮಂಗಳವಾರ ಮೋಡ ಕವಿದ ವಾತಾವರಣವಿತ್ತು. ಧಾರವಾಡ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಧ್ಯಾಹ್ನದಿಂದ ನಿರಂತರವಾಗಿ ಸಾಧಾರಣ ಮಳೆ ಸುರಿಯಿತು. ಹೀಗಾಗಿ ಮುಂಗಾರು ಆರಂಭಕ್ಕೂ ಮೊದಲೇ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ.</p>.<p>ಅಳ್ನಾವರ ಹಾಗೂ ಕಲಘಟಗಿ ಭಾಗಗಳಲ್ಲಿ ಕೆಲ ನಿಮಿಷ ಮಳೆ ಸುರಿದಿದೆ. ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ಭಾಗದಲ್ಲಿ ಮೋಡ ಕವಿದ ವಾತಾವರಣ ಇತ್ತು.</p>.<p>‘ನೈರುತ್ಯಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದು, ಅದು ಉತ್ತರದ ಕಡೆ ಚಲಿಸುತ್ತಿದೆ. ಹೀಗಾಗಿ ಮುಂದಿನ 2ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಮಿಂಚು, ಗುಡುಗು ಸಹಿತ ಚದುರಿದ ಮಳೆಯಾಗಲಿದೆ. ಬಿರುಸಿನ ಗಾಳಿ ಬೀಸಲಿದೆ’ ಎಂದು ಹವಾಮಾನ ವಿಭಾಗದ ಮುಖ್ಯಸ್ಥ ಡಾ. ಆರ್.ಎಚ್.ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಜಿಲ್ಲೆಯ ಕೆಲವೆಡೆ ಮಂಗಳವಾರ ಮಧ್ಯಾಹ್ನದಿಂದ ಸಾಧಾರಣ ಮಳೆ ಸುರಿಯಿತು. ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯದ ಹವಾಮಾನ ವಿಭಾಗ ತಿಳಿಸಿದೆ.</p>.<p>ಜಿಲ್ಲೆಯಾದ್ಯಂತ ಮಂಗಳವಾರ ಮೋಡ ಕವಿದ ವಾತಾವರಣವಿತ್ತು. ಧಾರವಾಡ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಧ್ಯಾಹ್ನದಿಂದ ನಿರಂತರವಾಗಿ ಸಾಧಾರಣ ಮಳೆ ಸುರಿಯಿತು. ಹೀಗಾಗಿ ಮುಂಗಾರು ಆರಂಭಕ್ಕೂ ಮೊದಲೇ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ.</p>.<p>ಅಳ್ನಾವರ ಹಾಗೂ ಕಲಘಟಗಿ ಭಾಗಗಳಲ್ಲಿ ಕೆಲ ನಿಮಿಷ ಮಳೆ ಸುರಿದಿದೆ. ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ಭಾಗದಲ್ಲಿ ಮೋಡ ಕವಿದ ವಾತಾವರಣ ಇತ್ತು.</p>.<p>‘ನೈರುತ್ಯಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದು, ಅದು ಉತ್ತರದ ಕಡೆ ಚಲಿಸುತ್ತಿದೆ. ಹೀಗಾಗಿ ಮುಂದಿನ 2ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಮಿಂಚು, ಗುಡುಗು ಸಹಿತ ಚದುರಿದ ಮಳೆಯಾಗಲಿದೆ. ಬಿರುಸಿನ ಗಾಳಿ ಬೀಸಲಿದೆ’ ಎಂದು ಹವಾಮಾನ ವಿಭಾಗದ ಮುಖ್ಯಸ್ಥ ಡಾ. ಆರ್.ಎಚ್.ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>