ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಬೆಳಗಾವಿ ಸೇರಿದಂತೆ ವಿವಿಧೆಡೆ ಗುರುವಾರ ಸಾಯಂಕಾಲ ಗುಡುಗು, ಸಿಡಿಲಿನೊಂದಿಗೆ ಕೆಲ ಸಮಯ ಧಾರಾಕಾರ ಮಳೆಯಾಗಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕು ಚಂದಾಪುರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಾಲತೇಶ ಜೆಟ್ಟೆಪ್ಪನವರ (16) ಹೊಲಕ್ಕೆ ಹೋದಾಗ ಸಿಡಿಲು ಬಡಿದು ಮೃತ ಪಟ್ಟಿದ್ದಾನೆ.