<p><strong>ಹುಬ್ಬಳ್ಳಿ</strong>: ‘ನಗರದಲ್ಲಿರುವ ರಾಜಕಾಲುವೆಗೆ ಹಂತ ಹಂತವಾಗಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಅದರ ಅಭಿವೃದ್ಧಿಗೆ ಅಡ್ಡಿಯಾಗಿರುವ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ಇಲ್ಲಿನ ಎಸ್.ಎಂ. ಕೃಷ್ಣನಗರದ ಬಳಿ ನಡೆಯುತ್ತಿರುವ ರಾಜಕಾಲುವೆ ತಡೆಗೋಡೆ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಅವರು ಮಾತನಾಡಿದರು.</p>.<p>‘ರಾಜಕಾಲುವೆಯ ಅಕ್ಕಪಕ್ಕದ ಒಂಬತ್ತು ಮೀಟರ್ ಜಾಗ ಸರ್ಕಾರದ ಸ್ವತ್ತಾಗಿರುತ್ತದೆ. ಅದನ್ನು ಒತ್ತುವರಿ ಮಾಡಿಕೊಳ್ಳುವುದು ಕಾನೂನು ಉಲ್ಲಂಘನೆ. ಜನರಿಗೆ ಕಾನೂನಿನ ಅರಿವು ಮತ್ತು ಭಯ ಇಲ್ಲದಂತಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೂ ಇದಕ್ಕೆ ಕಾರಣ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಪ್ರತಿ ಬಾರಿ ಮಳೆ ಬಂದಾಗಲೂ ಕಾಲುವೆಯ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಆದರೆ, ಇದಕ್ಕೆ ಸಾರ್ವಜನಿಕರು ಸ್ಪಂದಿಸದಿರುವುದು ದುರದೃಷ್ಟ. ಈ ಹಿನ್ನೆಲೆಯಲ್ಲಿ ಎಷ್ಟೇ ಒತ್ತಡ ಎದುರಾದರೂ ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಸ್ಥಳೀಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ನಗರದಲ್ಲಿರುವ ರಾಜಕಾಲುವೆಗೆ ಹಂತ ಹಂತವಾಗಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಅದರ ಅಭಿವೃದ್ಧಿಗೆ ಅಡ್ಡಿಯಾಗಿರುವ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.</p>.<p>ಇಲ್ಲಿನ ಎಸ್.ಎಂ. ಕೃಷ್ಣನಗರದ ಬಳಿ ನಡೆಯುತ್ತಿರುವ ರಾಜಕಾಲುವೆ ತಡೆಗೋಡೆ ಕಾಮಗಾರಿಯನ್ನು ಭಾನುವಾರ ವೀಕ್ಷಿಸಿ ಅವರು ಮಾತನಾಡಿದರು.</p>.<p>‘ರಾಜಕಾಲುವೆಯ ಅಕ್ಕಪಕ್ಕದ ಒಂಬತ್ತು ಮೀಟರ್ ಜಾಗ ಸರ್ಕಾರದ ಸ್ವತ್ತಾಗಿರುತ್ತದೆ. ಅದನ್ನು ಒತ್ತುವರಿ ಮಾಡಿಕೊಳ್ಳುವುದು ಕಾನೂನು ಉಲ್ಲಂಘನೆ. ಜನರಿಗೆ ಕಾನೂನಿನ ಅರಿವು ಮತ್ತು ಭಯ ಇಲ್ಲದಂತಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೂ ಇದಕ್ಕೆ ಕಾರಣ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಪ್ರತಿ ಬಾರಿ ಮಳೆ ಬಂದಾಗಲೂ ಕಾಲುವೆಯ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಆದರೆ, ಇದಕ್ಕೆ ಸಾರ್ವಜನಿಕರು ಸ್ಪಂದಿಸದಿರುವುದು ದುರದೃಷ್ಟ. ಈ ಹಿನ್ನೆಲೆಯಲ್ಲಿ ಎಷ್ಟೇ ಒತ್ತಡ ಎದುರಾದರೂ ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಸ್ಥಳೀಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>