ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದೇವೇಗೌಡ ಅವರು ಪ್ರಧಾನಿ ಹುದ್ದೆಗೇರಿದ ಏಕೈಕ ಕನ್ನಡಿಗ. ಸುದೀರ್ಘ ಕಾಲದ ಅವರ ರಾಜಕೀಯ ಅನುಭವವನ್ನು ನಾಡು ಪಕ್ಷಾತೀತವಾಗಿ ಗೌರವಿಸಬೇಕು. ರಾಜಣ್ಣ ಅವರು ಹಿರಿಯರ ಕುರಿತು ಹೇಳಿಕೆ ನೀಡುವಾಗ ಅಪಹಾಸ್ಯ ಮಾಡಬಾರದು. ರಾಜಕಾರಣಿಗಳ ನಡೆ ನೈತಿಕತೆಯ ಎಲ್ಲೆ ಮೀರಬಾರದು’ ಎಂದಿದ್ದಾರೆ.