ಪೌರಾಣಿಕ ನಾಟಕ, ಸಣ್ಣಾಟ–ದೊಡ್ಡಾಟ, ಕೋಲಾಟ, ಹೆಜ್ಜೆ ಮೇಳ ಮತ್ತು ಭಜನಾ ಮೇಳದಲ್ಲಿ ಶಹನಾಯಿ ನುಡಿಸುವುದರಲ್ಲಿ ಪ್ರಸಿದ್ಧರಾಗಿದ್ದಾರೆ. ಗುರು ಶಿಷ್ಯ ಪರಂಪರೆಯಲ್ಲಿ ಶಹನಾಯಿ ತರಬೇತಿಯನ್ನು ಮೂರು ತಿಂಗಳು ನೀಡಿದ್ದಾರೆ. ಧಾರವಾಡ ಆಕಾಶವಾಣಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ನೀಡಿರುವ ಅವರಿಗೆ, ಹಲವಾರು ಪ್ರಶಸ್ತಿಗಳು ದೊರಕಿವೆ. ಬೆಂಗಳೂರಿನ ಕರ್ನಾಟಕ ನೃತ್ಯ ಅಕಾಡೆಮಿ ‘ನಮ್ಮ ಸಾಧಕರು’ ಪ್ರಶಸ್ತಿ ನೀಡಿ ಗೌರವಿಸಿದೆ.