ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮಿಷನರೇಟ್ ಘಟಕದಲ್ಲಿ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಾಭೂರಾಮ್ ಅವರನ್ನು ರಾಜ್ಯ ಗುಪ್ತವಾರ್ತೆಯ ಪೊಲೀಸ್ ಮಹಾ ನಿರೀಕ್ಷಕ(ಐಜಿಪಿ) ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ತೆರವಾದ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ರಮಣ್ ಗುಪ್ತಾ ಅವರನ್ನು ವರ್ಗಾಯಿಸಲಾಗಿದೆ. 2005ನೇ ಬ್ಯಾಚ್'ನ ಐಪಿಎಸ್ ಅಧಿಕಾರಿಯಾದ ಇವರನ್ನು, ಎರಡು ದಿನಗಳ ಹಿಂದೆ ಸರ್ಕಾರ ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕ(ಐಜಿಪಿ) ಹುದ್ದೆಗೆ ವರ್ಗಾಯಿಸಿತ್ತು. ಇದೀಗ ಪರಿಷ್ಕೃತ ಆದೇಶ ಹೊರಡಿಸಿದೆ