ಹುಬ್ಬಳ್ಳಿ: ಶರಣ ಸಾಹಿತ್ಯ ಸಂಶೋಧನೆಗಾಗಿ ನಗರದ ಸಾಹಿತಿ ಡಾ. ಬಿ.ವಿ. ಶಿರೂರ ಅವರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಮಣಶ್ರೀ ಶರಣ ಪ್ರಶಸ್ತಿ– 2022ಗೆ ಭಾಜನರಾಗಿದ್ದಾರೆ.
ಕನ್ನಡ ವಿದ್ವಾಂಸರಾದ ಶಿರೂರ ಅವರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಆಡೂರ ಗ್ರಾಮದಲ್ಲಿ ಜನಿಸಿದರು. ಬಸವ ಕೇಂದ್ರದ ಅಧ್ಯಕ್ಷರಾಗಿದ್ದ ಅವರು, ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಜೈನ ಸಾಹಿತ್ಯ ಪ್ರವಾಚಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.
ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನದ ಸಹಯೋಗದಲ್ಲಿ ಬೆಂಗಳೂರಿನ ರಮಣಶ್ರೀ ಹೊಟೇಲ್ನಲ್ಲಿ ನ. 17ರಂದು ಬೆಳಿಗ್ಗೆ 11.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.