<p><strong>ಧಾರವಾಡ</strong>: ರಾಮಚಂದ್ರಾಪುರ ಮಠದ ಘನತೆಗೆ ಚ್ಯುತಿ ಉಂಟು ಮಾಡುವಂಥ ಸಿ.ಡಿ ತಯಾರಿಕೆಗೆ ಸಂಬಂಧಿಸಿದ ಪ್ರಕರಣದಿಂದ ಹೆಸರು ಕೈ ಬಿಡುವಂತೆ ಕೋರಿ ಆರೋಪಿ ವಿಶ್ವನಾಥ ಫಣಿರಾಜ ಗೋಪಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.</p>.<p>ವಿಡಿಯೊ ಕಾನ್ಫರೆನ್ಸ್ ಮೂಲಕ ಆದೇಶ ಪ್ರಕಟಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ, ಸಾಕ್ಷಿಗಳ ಹೇಳಿಕೆ ದಾಖಲೆ ಆರಂಭಗೊಂಡ ದಿನದಿಂದ ಒಂದು ವರ್ಷದ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸಬೇಕು ಎಂದು ನಿರ್ದೇಶನ ನೀಡಿತು.</p>.<p>ಸ್ವಾಮೀಜಿಯವರನ್ನು ಹೋಲುವ ವ್ಯಕ್ತಿಯನ್ನಿರಿಸಿಕೊಂಡು, ತಂತ್ರಜ್ಞಾನ ಬಳಸಿ ಸಿಡಿ ತಯಾರಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು 2010ರಲ್ಲಿ ಶ್ರೀಮಠ ದೂರು ಸಲ್ಲಿಸಿತ್ತು. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿತ್ತು.</p>.<p>ಕುಮಟಾ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಮೊದಲು ಆರೋಪಿ ಮನವಿಯನ್ನು ಅಲ್ಲಿನ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮನವಿ ಸಲ್ಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ರಾಮಚಂದ್ರಾಪುರ ಮಠದ ಘನತೆಗೆ ಚ್ಯುತಿ ಉಂಟು ಮಾಡುವಂಥ ಸಿ.ಡಿ ತಯಾರಿಕೆಗೆ ಸಂಬಂಧಿಸಿದ ಪ್ರಕರಣದಿಂದ ಹೆಸರು ಕೈ ಬಿಡುವಂತೆ ಕೋರಿ ಆರೋಪಿ ವಿಶ್ವನಾಥ ಫಣಿರಾಜ ಗೋಪಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.</p>.<p>ವಿಡಿಯೊ ಕಾನ್ಫರೆನ್ಸ್ ಮೂಲಕ ಆದೇಶ ಪ್ರಕಟಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ, ಸಾಕ್ಷಿಗಳ ಹೇಳಿಕೆ ದಾಖಲೆ ಆರಂಭಗೊಂಡ ದಿನದಿಂದ ಒಂದು ವರ್ಷದ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸಬೇಕು ಎಂದು ನಿರ್ದೇಶನ ನೀಡಿತು.</p>.<p>ಸ್ವಾಮೀಜಿಯವರನ್ನು ಹೋಲುವ ವ್ಯಕ್ತಿಯನ್ನಿರಿಸಿಕೊಂಡು, ತಂತ್ರಜ್ಞಾನ ಬಳಸಿ ಸಿಡಿ ತಯಾರಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು 2010ರಲ್ಲಿ ಶ್ರೀಮಠ ದೂರು ಸಲ್ಲಿಸಿತ್ತು. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿತ್ತು.</p>.<p>ಕುಮಟಾ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಮೊದಲು ಆರೋಪಿ ಮನವಿಯನ್ನು ಅಲ್ಲಿನ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮನವಿ ಸಲ್ಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>