‘ಬಂಧನ ಪ್ರಕ್ರಿಯೆಗೆ ಪೂರಕವಾಗಿ ರಾತ್ರಿ 12.10ಕ್ಕೆ ಸುತಗಟ್ಟಿ ಗ್ರಾಮಕ್ಕೆ ಪೊಲೀಸರು ತೆರಳಿದ ಸಂದರ್ಭದಲ್ಲಿ ಸದ್ದಾಂ ಹುಸೇನ್ ಬಟನ್ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ. ಆತ್ಮರಕ್ಷಣೆಗಾಗಿ ವಿದ್ಯಾಗಿರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂಗಮೇಶ ಡಿಂಗಿನಾಳ ಒಂದು ಗುಂಡು ಗಾಳಿಯಲ್ಲಿ ಹಾರಿಸಿ, ಇನ್ನೊಂದು ಗುಂಡನ್ನು ಅವನ ಎಡಗಾಲಿಗೆ ಹೊಡೆದರು’ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.