<p>ಉಪ್ಪಿನಬೆಟಗೇರಿ: ಅಮ್ಮಿನಬಾವಿ ಪಂಚಗೃಹ ಹಿರೇಮಠದ ಪ್ರಥಮ ಜಾತ್ರಾಮಹೋತ್ಸವದ ಅಂಗವಾಗಿ ಶುಕ್ರವಾರ ಗುರು ಶಾಂತಲಿಂಗ ಶಿವಯೋಗಿಗಳ ರಥೋತ್ಸವ ಭಕ್ತರ ಜಯಘೋಷದ ನಡುವೆ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆ ಶಿವಯೋಗಿಗಳ ಕರ್ತೃ ಗದ್ದುಗೆಗೆ ಅರ್ಚಕರಿಂದ ರುದ್ರಾಭಿಷೇಕ ಹಾಗೂ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಮಧ್ಯಾಹ್ನ ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಧಾರ್ಮಿಕ ಸಮಾರಂಭ ನಡೆಯಿತು. ಮಧ್ಯಾಹ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.<br /> ಸಂಜೆ ಜಾನಪದ ವಾದ್ಯ– ಮೇಳದೊಂದಿಗೆ ಆರಂಭವಾದ ರಥೋತ್ಸವಕ್ಕೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.</p>.<p>ಪಂಚಗೃಹ ಹಿರೇಮಠದಿಂದ ಹೊರಟ ನೂತನ ರಥವು ಮಸ್ಜಿದ್, ಪ್ರಮುಖ ರಸ್ತೆ, ಈಶ್ವರ ದೇವಸ್ಥಾನದವರೆಗೆ ಎಳೆದ ಭಕ್ತರು ಮರಳಿ ಶ್ರೀಮಠಕ್ಕೆ ತಂದರು. ಮಹಿಳೆಯರು ಹೂವು, ಹಣ್ಣು,ಕಾಯಿ, ನೈವೇದ್ಯ ಅರ್ಪಿಸಿದರು. ಭಕ್ತರು ತೇರಿಗೆ ಉತ್ತತ್ತಿ, ಲಿಂಬೆ, ಬಾಳೆಹಣ್ಣು ಎಸೆದು ನಮಿಸಿದರು.</p>.<p>ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬೆಳಗುಂಪಾ ಬೃಹನ್ಮಠದ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ಬ್ಯಾಹಟ್ಟಿಯ ಮರುಳಸಿದ್ದ ಶಿವಾಚಾರ್ಯರು, ನರೇಂದ್ರ ಮಳೆಪ್ಪಜ್ಜನ ಮಠದ ಸಂಗಮೇಶ ಸ್ವಾಮೀಜಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಪ್ಪಿನಬೆಟಗೇರಿ: ಅಮ್ಮಿನಬಾವಿ ಪಂಚಗೃಹ ಹಿರೇಮಠದ ಪ್ರಥಮ ಜಾತ್ರಾಮಹೋತ್ಸವದ ಅಂಗವಾಗಿ ಶುಕ್ರವಾರ ಗುರು ಶಾಂತಲಿಂಗ ಶಿವಯೋಗಿಗಳ ರಥೋತ್ಸವ ಭಕ್ತರ ಜಯಘೋಷದ ನಡುವೆ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆ ಶಿವಯೋಗಿಗಳ ಕರ್ತೃ ಗದ್ದುಗೆಗೆ ಅರ್ಚಕರಿಂದ ರುದ್ರಾಭಿಷೇಕ ಹಾಗೂ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಮಧ್ಯಾಹ್ನ ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಧಾರ್ಮಿಕ ಸಮಾರಂಭ ನಡೆಯಿತು. ಮಧ್ಯಾಹ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.<br /> ಸಂಜೆ ಜಾನಪದ ವಾದ್ಯ– ಮೇಳದೊಂದಿಗೆ ಆರಂಭವಾದ ರಥೋತ್ಸವಕ್ಕೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.</p>.<p>ಪಂಚಗೃಹ ಹಿರೇಮಠದಿಂದ ಹೊರಟ ನೂತನ ರಥವು ಮಸ್ಜಿದ್, ಪ್ರಮುಖ ರಸ್ತೆ, ಈಶ್ವರ ದೇವಸ್ಥಾನದವರೆಗೆ ಎಳೆದ ಭಕ್ತರು ಮರಳಿ ಶ್ರೀಮಠಕ್ಕೆ ತಂದರು. ಮಹಿಳೆಯರು ಹೂವು, ಹಣ್ಣು,ಕಾಯಿ, ನೈವೇದ್ಯ ಅರ್ಪಿಸಿದರು. ಭಕ್ತರು ತೇರಿಗೆ ಉತ್ತತ್ತಿ, ಲಿಂಬೆ, ಬಾಳೆಹಣ್ಣು ಎಸೆದು ನಮಿಸಿದರು.</p>.<p>ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಬೆಳಗುಂಪಾ ಬೃಹನ್ಮಠದ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ಬ್ಯಾಹಟ್ಟಿಯ ಮರುಳಸಿದ್ದ ಶಿವಾಚಾರ್ಯರು, ನರೇಂದ್ರ ಮಳೆಪ್ಪಜ್ಜನ ಮಠದ ಸಂಗಮೇಶ ಸ್ವಾಮೀಜಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>