ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಧಾರವಾಡದ ಕನಕ ಕಲಾ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ಜರುಗಲಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಗೋಟಗೋಡಿ ಜಾನಪದ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಚಂದ್ರಪ್ಪ ಸೊಬಟೆ ಅಧ್ಯಕ್ಷತೆ ವಹಿಸುವರು. ಕೊನೆಯ ದಿನ ಬೆಳಿಗ್ಗೆ 9 ಗಂಟೆಗೆ ಕಲಾಭವನದಿಂದ ವಿದ್ಯಾವರ್ಧಕ ಸಂಘದ ತನಕ ರಾಯಣ್ಣನ ಭಾವಚಿತ್ರದ ಮೆರವಣಿಗೆ ಜರುಗಲಿದೆ. ಬಳಿಕ ಯುವ ಸಮಾವೇಶ, ರಾಯಣ್ಣ ಪ್ರಶಸ್ತಿ ಪ್ರದಾನ ನಡೆಯಲಿದೆ.