‘ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಕುಸುಮಾವತಿ ಶಿವಳ್ಳಿ, ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ಹೆಸರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ, ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು’ ಎಂದರು.