ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪ್ರತಿ ಜಿಲ್ಲೆಗಳಲ್ಲಿ ಕಾರ್ಮಿಕರು, ಆಟೊ ಚಾಲಕರು, ಶಿಕ್ಷಕರು, ವೈದ್ಯರು ಹೀಗೆ ಎಲ್ಲ ಪ್ರಮುಖರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು. ಅಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳ ಆಧಾರದ ಮೇಲೆ ಮುಂದಿನ ಹಾದಿಯ ಬಗ್ಗೆ ಯೋಜನೆ ರೂಪಿಸಲಾಗುವುದು. ಈ ಕಾರ್ಯಕ್ರಮಕ್ಕೆ ಭಾನುವಾರ (ಡಿ. 13) ಸಂಜೆ 5 ಗಂಟೆಗೆ ನವನಗರದಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಚಾಲನೆ ನೀಡಲಾಗುವುದು. ನವನಗರದಿಂದ ನವರಾಜ್ಯ ಸ್ಥಾಪನೆಯ ಹೋರಾಟಕ್ಕೆ ಮುನ್ನುಡಿ ಬರೆಯಲಾಗುವುದು’ ಎಂದು ಹೇಳಿದರು.