<p><strong>ಹುಬ್ಬಳ್ಳಿ: </strong>‘ಬೆಳಗಾವಿಯ ಗಡಿಭಾಗದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ನಿಯಮಗಳನ್ನು ಸಡಿಲಗೊಳಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ಮಾಡಿದ್ದಾರೆ.</p>.<p>‘ಪ್ರಜಾವಾಣಿ’ಯಲ್ಲಿ ಜ.3ರಂದು ಪ್ರಕಟವಾಗಿರುವ ‘ಕನ್ನಡ ಮಾಧ್ಯಮ ಪ್ರೌಢಶಾಲೆಯೇ ಇಲ್ಲ!’ ಎಂಬ ವಿಶೇಷ ವರದಿ ಉಲ್ಲೇಖಿಸಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.</p>.<p>‘ಗಡಿಭಾಗದ ಮಕ್ಕಳು ಕನ್ನಡ ಕಲಿಕೆಯಿಂದ ವಂಚಿತರಾದರೆ, ಆ ಭಾಗದಲ್ಲಿ ಕನ್ನಡ ನಶಿಸುತ್ತದೆ. ಇದಕ್ಕೆ ಸರ್ಕಾರವೇ ಕಾರಣವಾದಂತಾಗುತ್ತದೆ. ಶಾಲೆ ಆರಂಭಿಸಲು 70 ವಿದ್ಯಾರ್ಥಿಗಳಿರಬೇಕು ಹಾಗೂ ಐದು ಕಿ.ಮೀ ವ್ಯಾಪ್ತಿಯಲ್ಲಿ ಬೇರೆ ಪ್ರೌಢಶಾಲೆ ಇರಬಾರದು ಎಂಬ ನಿಯಮವಿದೆ. ಈ ನಿಯಮಗಳನ್ನು ಸಡಿಲಗೊಳಿಸಬೇಕು‘ ಎಂದು ಹೇಳಿದ್ದಾರೆ.</p>.<p>‘ಈ ವಿಷಯದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಬೇಕು. ಉಚಗಾವಿ, ಹಿಂಡಲಗಾ ಹಾಗೂ ಕುದ್ರೇಮನಿಯಲ್ಲಿ ಶಾಲೆ ಆರಂಭಕ್ಕೆ ಸಲ್ಲಿಕೆಯಾಗಿರುವ ಪ್ರಸ್ತಾವಕ್ಕೆ ಅನುಮತಿ ನೀಡಬೇಕು’ ಎಂದು ಮುಖ್ಯಮಂತ್ರಿಯವರಿಗೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಬೆಳಗಾವಿಯ ಗಡಿಭಾಗದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಗಳನ್ನು ಪ್ರಾರಂಭಿಸಲು ಸರ್ಕಾರ ನಿಯಮಗಳನ್ನು ಸಡಿಲಗೊಳಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ಮಾಡಿದ್ದಾರೆ.</p>.<p>‘ಪ್ರಜಾವಾಣಿ’ಯಲ್ಲಿ ಜ.3ರಂದು ಪ್ರಕಟವಾಗಿರುವ ‘ಕನ್ನಡ ಮಾಧ್ಯಮ ಪ್ರೌಢಶಾಲೆಯೇ ಇಲ್ಲ!’ ಎಂಬ ವಿಶೇಷ ವರದಿ ಉಲ್ಲೇಖಿಸಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.</p>.<p>‘ಗಡಿಭಾಗದ ಮಕ್ಕಳು ಕನ್ನಡ ಕಲಿಕೆಯಿಂದ ವಂಚಿತರಾದರೆ, ಆ ಭಾಗದಲ್ಲಿ ಕನ್ನಡ ನಶಿಸುತ್ತದೆ. ಇದಕ್ಕೆ ಸರ್ಕಾರವೇ ಕಾರಣವಾದಂತಾಗುತ್ತದೆ. ಶಾಲೆ ಆರಂಭಿಸಲು 70 ವಿದ್ಯಾರ್ಥಿಗಳಿರಬೇಕು ಹಾಗೂ ಐದು ಕಿ.ಮೀ ವ್ಯಾಪ್ತಿಯಲ್ಲಿ ಬೇರೆ ಪ್ರೌಢಶಾಲೆ ಇರಬಾರದು ಎಂಬ ನಿಯಮವಿದೆ. ಈ ನಿಯಮಗಳನ್ನು ಸಡಿಲಗೊಳಿಸಬೇಕು‘ ಎಂದು ಹೇಳಿದ್ದಾರೆ.</p>.<p>‘ಈ ವಿಷಯದ ಬಗ್ಗೆ ವೈಯಕ್ತಿಕವಾಗಿ ಗಮನಹರಿಸಬೇಕು. ಉಚಗಾವಿ, ಹಿಂಡಲಗಾ ಹಾಗೂ ಕುದ್ರೇಮನಿಯಲ್ಲಿ ಶಾಲೆ ಆರಂಭಕ್ಕೆ ಸಲ್ಲಿಕೆಯಾಗಿರುವ ಪ್ರಸ್ತಾವಕ್ಕೆ ಅನುಮತಿ ನೀಡಬೇಕು’ ಎಂದು ಮುಖ್ಯಮಂತ್ರಿಯವರಿಗೆ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>