ಅಂದಾಜು ಪ್ರತಿನಿತ್ಯ ಒಟ್ಟು 4000 ರಿಂದ 5000 ಮಕ್ಕಳು ಮಾತ್ರ ಊಟ ಮಾಡುತ್ತಿದ್ದಾರೆ. ಉಳಿದ ಊಟವು ಮಕ್ಕಳು ಆಗಮಿಸದ ಕಾರಣ ವ್ಯರ್ಥವಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಕ್ಷರ ದಾಸೋಹ ಇಲಾಖೆ, ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ಇದ್ದರೂ ಕೂಡಾ ಅವರು ಇದರ ಬಗ್ಗೆ ಮೌನ ವಹಿಸಿರುವುದರಿಂದ ಸರ್ಕಾರದ ಯೋಜನೆಯು ವ್ಯರ್ಥವಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿ, ಶಿಕ್ಷಣ ಇಲಾಖೆ ಮೇಲಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮವಹಿಸಬೇಕಾಗಿದೆ ಎಂಬುದು ಸಾರ್ವಜನಿಕರ ಅಗ್ರಹವಾಗಿದೆ.