<p><strong>ಹುಬ್ಬಳ್ಳಿ</strong>: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ವತಿಯಿಂದ ಆಗ್ರಹಿಸಲಾಯಿತು.</p>.<p>ನಗರದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸಂಘಟನೆಯ ಮುಖಂಡರು ಈ ಕುರಿತು ಬುಧವಾರ ಮನವಿ ಸಲ್ಲಿಸಿದರು.</p>.<p>ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ₹1 ಕೋಟಿ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಯುವ ಘಟಕದ ಅಧ್ಯಕ್ಷ ನಿರಂಜನಯ್ಯ ಹಿರೇಮಠ, ಆಟೊ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮೊದಲಾದವರಿದ್ದರು.</p>.<p>ಸಮತಾ ಸೇನಾ, ವಿವಿಧ ದಲಿತ ಸಂಘ–ಸಂಸ್ಥೆಗಳ ಮಹಾಮಂಡಳ ಖಂಡನೆ: ‘ಹುಬ್ಬಳ್ಳಿಯಲ್ಲಿ ನೇಹಾ ಮತ್ತು ಅಂಜಲಿ ಹತ್ಯೆ ನಡೆದಾಗ ಬೀದಿಗಿಳಿದು ಬೊಬ್ಬೆ ಹೊಡೆದ ಹಿಂದೂ ಸಂಘಟನೆಯರು ಈಗ ಎಲ್ಲಿ ಕಾಣೆಯಾದರು’ ಎಂದು ಸಮತಾ ಸೇನಾ, ವಿವಿಧ ದಲಿತ ಸಂಘ– ಸಂಸ್ಥೆಗಳ ಮಹಾಮಂಡಳ ಪ್ರಶ್ನಿಸಿದೆ.</p>.<p>‘ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ, ಹಿಂದೂಗಳ ಹೆಸರಿಗೆ ಮಸಿ ಬಳಿಯುವ ಸಂಘ ಹಾಗೂ ಪಕ್ಷಗಳಿಗೆ ರೇಣುಕಾಸ್ವಾಮಿ ಪತ್ನಿಯ ಕೂಗು ಕೇಳಲಿಲ್ಲವೇ? ನಟ ದರ್ಶನ ಮತ್ತು ಸಹಚರರಿಂದ ಹತ್ಯೆ ನಡೆದಿರುವುದಾಗಿ ತಿಳಿದೂ ಮೌನವಹಿಸಿವೆ’ ಎಂದು ಮಂಡಳದ ಪ್ರಮುಖ ಗುರುನಾಥ ಉಳ್ಳಿಕಾಶಿ ಪ್ರಕಟಣೆಯಲ್ಲಿ ಛೇಡಿಸಿದ್ದಾರೆ.</p>.<p>‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಶಿಕ್ಷೆ ನೀಡಬೇಕು. ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರಬಾರದು. ಶವ ರಾಜಕೀಯ ಬಿಟ್ಟು ದೇಶದ ಕಾನೂನು ಗೌರವಿಸುವುದನ್ನು ಹಲವರು ಕಲಿಬೇಕು’ ಎಂದು ತಿಳಿಸಿದ್ದಾರೆ.</p>.<p>ಚಿತ್ರರಂಗ ತಲೆತಗ್ಗಿಸುವಂತಾಗಿದೆ: ರೇಣುಕಾಸ್ವಾಮಿ ಹತ್ಯೆ ಸಂಬಂಧ ಚಿತ್ರನಟ ದರ್ಶನ್ ಬಂಧನವಾಗಿದ್ದು, ಇದರಿಂದ ಕನ್ನಡ ಚಿತ್ರರಂಗ ಮತ್ತು ಕನ್ನಡಾಭಿಮಾನಿಗಳು ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಿವಾನಂದ ಮುತ್ತಣ್ಣವರ ತಿಳಿಸಿದ್ದಾರೆ.</p>.<p>ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಪೊಲೀಸರ ಗಮನಕ್ಕೆ ತರಬೇಕಿತ್ತು. ರಾಜ್ಕುಮಾರ್, ತೂಗುದೀಪ ಶ್ರೀನಿವಾಸ್ ಉತ್ತಮ ರೀತಿಯಲ್ಲಿ ಬದುಕಿದವರು. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ವಿಶ್ವಾಸವಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕುರಿತು ಸಮರ್ಪಕವಾಗಿ ತನಿಖೆ ನಡೆಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ವತಿಯಿಂದ ಆಗ್ರಹಿಸಲಾಯಿತು.</p>.<p>ನಗರದ ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸಂಘಟನೆಯ ಮುಖಂಡರು ಈ ಕುರಿತು ಬುಧವಾರ ಮನವಿ ಸಲ್ಲಿಸಿದರು.</p>.<p>ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ₹1 ಕೋಟಿ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆಯ ಯುವ ಘಟಕದ ಅಧ್ಯಕ್ಷ ನಿರಂಜನಯ್ಯ ಹಿರೇಮಠ, ಆಟೊ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಮೊದಲಾದವರಿದ್ದರು.</p>.<p>ಸಮತಾ ಸೇನಾ, ವಿವಿಧ ದಲಿತ ಸಂಘ–ಸಂಸ್ಥೆಗಳ ಮಹಾಮಂಡಳ ಖಂಡನೆ: ‘ಹುಬ್ಬಳ್ಳಿಯಲ್ಲಿ ನೇಹಾ ಮತ್ತು ಅಂಜಲಿ ಹತ್ಯೆ ನಡೆದಾಗ ಬೀದಿಗಿಳಿದು ಬೊಬ್ಬೆ ಹೊಡೆದ ಹಿಂದೂ ಸಂಘಟನೆಯರು ಈಗ ಎಲ್ಲಿ ಕಾಣೆಯಾದರು’ ಎಂದು ಸಮತಾ ಸೇನಾ, ವಿವಿಧ ದಲಿತ ಸಂಘ– ಸಂಸ್ಥೆಗಳ ಮಹಾಮಂಡಳ ಪ್ರಶ್ನಿಸಿದೆ.</p>.<p>‘ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ, ಹಿಂದೂಗಳ ಹೆಸರಿಗೆ ಮಸಿ ಬಳಿಯುವ ಸಂಘ ಹಾಗೂ ಪಕ್ಷಗಳಿಗೆ ರೇಣುಕಾಸ್ವಾಮಿ ಪತ್ನಿಯ ಕೂಗು ಕೇಳಲಿಲ್ಲವೇ? ನಟ ದರ್ಶನ ಮತ್ತು ಸಹಚರರಿಂದ ಹತ್ಯೆ ನಡೆದಿರುವುದಾಗಿ ತಿಳಿದೂ ಮೌನವಹಿಸಿವೆ’ ಎಂದು ಮಂಡಳದ ಪ್ರಮುಖ ಗುರುನಾಥ ಉಳ್ಳಿಕಾಶಿ ಪ್ರಕಟಣೆಯಲ್ಲಿ ಛೇಡಿಸಿದ್ದಾರೆ.</p>.<p>‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಶಿಕ್ಷೆ ನೀಡಬೇಕು. ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರಬಾರದು. ಶವ ರಾಜಕೀಯ ಬಿಟ್ಟು ದೇಶದ ಕಾನೂನು ಗೌರವಿಸುವುದನ್ನು ಹಲವರು ಕಲಿಬೇಕು’ ಎಂದು ತಿಳಿಸಿದ್ದಾರೆ.</p>.<p>ಚಿತ್ರರಂಗ ತಲೆತಗ್ಗಿಸುವಂತಾಗಿದೆ: ರೇಣುಕಾಸ್ವಾಮಿ ಹತ್ಯೆ ಸಂಬಂಧ ಚಿತ್ರನಟ ದರ್ಶನ್ ಬಂಧನವಾಗಿದ್ದು, ಇದರಿಂದ ಕನ್ನಡ ಚಿತ್ರರಂಗ ಮತ್ತು ಕನ್ನಡಾಭಿಮಾನಿಗಳು ತಲೆ ತಗ್ಗಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಿವಾನಂದ ಮುತ್ತಣ್ಣವರ ತಿಳಿಸಿದ್ದಾರೆ.</p>.<p>ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಪೊಲೀಸರ ಗಮನಕ್ಕೆ ತರಬೇಕಿತ್ತು. ರಾಜ್ಕುಮಾರ್, ತೂಗುದೀಪ ಶ್ರೀನಿವಾಸ್ ಉತ್ತಮ ರೀತಿಯಲ್ಲಿ ಬದುಕಿದವರು. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವ ವಿಶ್ವಾಸವಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>