<p><strong>ಹುಬ್ಬಳ್ಳಿ</strong>: ‘ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಘಟನೆ ರಾಕ್ಷಸಿ ಕೃತ್ಯವಾಗಿದೆ. ಕೊಲೆಗೈದವರಿಗೆ ಕಠಿಣ ಶಿಕ್ಷೆ ಆಗಬೇಕು’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ನಟ ದರ್ಶನ ಅವರ ಹೆಸರು ಬಂದಿದೆ. ಇದೂ ತನಿಖೆ ಪೂರ್ಣಗೊಂಡ ನಂತರವಷ್ಟೇ ಈ ಘಟನೆಯಲ್ಲಿ ಅವರ ಪಾತ್ರ ತಿಳಿಯಬೇಕಾಗಿದೆ. ದೊಡ್ಡ ನಟನ ಹೆಸರು ಇದರಲ್ಲಿ ಕೇಳಿ ಬಂದ ತಕ್ಷಣ ಹಲವು ಅನುಮಾನಗಳು ಹುಟ್ಟುತ್ತವೆ. ಸರ್ಕಾರ ಕಠಿಣ ಕ್ರಮಕೈಗೊಂಡು, ತಪ್ಪು ಎಸಗಿದವರಿಗೆ ಕಾನೂನು ರೀತಿ ಶಿಕ್ಷೆಯಾಗಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ರೇಣುಕಾಸ್ವಾಮಿ ಸೋಷಿಯಲ್ ಮೀಡಿಯಾದಲ್ಲಿ ಅಸಭ್ಯವಾಗಿ ವರ್ತಿಸಿದ್ದರೆ ಅದಕ್ಕೆ ಸೈಬರ್ ಠಾಣೆಗೆ ದೂರು ಕೊಡಬಹುದಿತ್ತು. ಅವೆಲ್ಲವನ್ನು ಬಿಟ್ಟು ತಾವೇ ಈ ರೀತಿ ಕಾನೂನು ಕೈಗೆತ್ತಿಕೊಳ್ಳುವುದು ಎಷ್ಟು ಸರಿ? ಈ ಕೊಲೆಯಲ್ಲಿ ಆರೋಪಿಗಳು ಎಷ್ಟೇ ದೊಡ್ಡ ವ್ಯಕ್ತಿ ಇದ್ದರೂ ಕಠಿಣ ಶಿಕ್ಷೆ ಆಗಲೇ ಬೇಕು’ ಎಂದು ಶೆಟ್ಟರ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಘಟನೆ ರಾಕ್ಷಸಿ ಕೃತ್ಯವಾಗಿದೆ. ಕೊಲೆಗೈದವರಿಗೆ ಕಠಿಣ ಶಿಕ್ಷೆ ಆಗಬೇಕು’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ನಟ ದರ್ಶನ ಅವರ ಹೆಸರು ಬಂದಿದೆ. ಇದೂ ತನಿಖೆ ಪೂರ್ಣಗೊಂಡ ನಂತರವಷ್ಟೇ ಈ ಘಟನೆಯಲ್ಲಿ ಅವರ ಪಾತ್ರ ತಿಳಿಯಬೇಕಾಗಿದೆ. ದೊಡ್ಡ ನಟನ ಹೆಸರು ಇದರಲ್ಲಿ ಕೇಳಿ ಬಂದ ತಕ್ಷಣ ಹಲವು ಅನುಮಾನಗಳು ಹುಟ್ಟುತ್ತವೆ. ಸರ್ಕಾರ ಕಠಿಣ ಕ್ರಮಕೈಗೊಂಡು, ತಪ್ಪು ಎಸಗಿದವರಿಗೆ ಕಾನೂನು ರೀತಿ ಶಿಕ್ಷೆಯಾಗಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ರೇಣುಕಾಸ್ವಾಮಿ ಸೋಷಿಯಲ್ ಮೀಡಿಯಾದಲ್ಲಿ ಅಸಭ್ಯವಾಗಿ ವರ್ತಿಸಿದ್ದರೆ ಅದಕ್ಕೆ ಸೈಬರ್ ಠಾಣೆಗೆ ದೂರು ಕೊಡಬಹುದಿತ್ತು. ಅವೆಲ್ಲವನ್ನು ಬಿಟ್ಟು ತಾವೇ ಈ ರೀತಿ ಕಾನೂನು ಕೈಗೆತ್ತಿಕೊಳ್ಳುವುದು ಎಷ್ಟು ಸರಿ? ಈ ಕೊಲೆಯಲ್ಲಿ ಆರೋಪಿಗಳು ಎಷ್ಟೇ ದೊಡ್ಡ ವ್ಯಕ್ತಿ ಇದ್ದರೂ ಕಠಿಣ ಶಿಕ್ಷೆ ಆಗಲೇ ಬೇಕು’ ಎಂದು ಶೆಟ್ಟರ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>