ಈ ಕುರಿತು ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ’ಮಳೆಗಾಲ ಆರಂಭಕ್ಕೂ ಮುನ್ನವೇ ಅವಳಿ ನಗರದಲ್ಲಿ ಗುಂಡಿ ಬಿದ್ದಿರುವ ಎಲ್ಲ ರಸ್ತೆಗಳನ್ನು ದುರಸ್ತಿ ಮಾಡಲು ಗುತ್ತಿಗೆ ಕೊಡಲಾಗಿತ್ತು. ಕೆಲವೆಡೆ ಕಾಮಗಾರಿ ಕೂಡ ಆರಂಭವಾಗಿತ್ತು. ಬಳಿಕ ಲಾಕ್ಡೌನ್ ಘೋಷಣೆಯಾದ ಕಾರಣ ಕೆಲಸ ಪೂರ್ಣಗೊಳ್ಳಲಿಲ್ಲ. ಈಗ ಮಳೆಗಾಲ ಆರಂಭವಾಗಿದ್ದು, ಕಾಮಗಾರಿ ಮಾಡಲು ಆಗುವುದಿಲ್ಲ. ಮಳೆಗಾಲದ ಬಳಿಕ ಬಾಕಿ ಕೆಲಸ ಮಾಡಲಾಗುವುದು‘ ಎಂದರು.