ಚಾಣಕ್ಯಪುರಿಯ ಎಸ್ಎಸ್ಕೆ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಮತ್ತು ಪದವಿ ಕಾಲೇಜು, ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯ, ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಸಂಸದರ ಕಚೇರಿ, ಎಪಿಎಂಸಿ ವ್ಯಾಪಾರಸ್ಥರ ಸಂಘ, ಅರವಿಂದ ನಗರದ ಹುಲಿಗೆಮ್ಮ ದೇವಸ್ಥಾನ, ಶಕ್ತಿ ಕಾಲೊನಿಯ ಜೆ.ಕೆ. ಇಂಗ್ಲಿಷ್ ಮಾಧ್ಯಮ ಶಾಲೆ, ಭವಾನಿನಗರದ ಭಾವದೀಪ ಶಿಕ್ಷಣ ಸಂಸ್ಥೆಯ ಶ್ರೀಮತಿ ವಿಮಲಾ ಕುಲಕರ್ಣಿ ಮೆಮೋರಿಯಲ್ ಶಾಲೆ, ಚೇತನಾ ಕಾಲೇಜು, ಕೇಶ್ವಾಪುರದ ಲೆಕ್ಕಪರಿಶೋಧಕರ ಸಂಸ್ಥೆ, ಕೆಎಲ್ಇ ಪ್ರೇರಣಾ ಕಾಲೇಜು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಕಮರಿಪೇಟೆಯ ಶ್ರೀರಾಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವ ಆಚರಿಸಲಾಯಿತು. ಗಣ್ಯರು ಭಾಷಣ ಮಾಡಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.