ಆಗ್ರಹ: ಶಿವಮೊಗ್ಗ ಜಿಲ್ಲೆಯಲ್ಲಿ 2015ರಿಂದ 2017ರ ತನಕದ ಅವಧಿಯಲ್ಲಿ 9,934 ಎಕರೆ ಎರಡು ಗುಂಟೆ ಅರಣ್ಯ ಭೂಮಿಯನ್ನು ಕೇಂದ್ರ ಸರ್ಕಾರದ ಪೂರ್ವಾನುಮತಿ ಇಲ್ಲದೆ ಡಿನೋಟಿಫಿಕೇಷನ್ ಮಾಡಲಾಗಿದೆ. ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು, 1980ರ ನಂತರ ಡಿನೋಟಿಫಿಕೇಷನ್ ಮಾಡಿರುವ ಎಲ್ಲಾ ಅರಣ್ಯ ಭೂಮಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.