<p><strong>ಹುಬ್ಬಳ್ಳಿ: </strong>ನಗರದ ಹಳೇ ಕೋರ್ಟ್ ವೃತ್ತದಲ್ಲಿರುವ ಸಾಯಿ ಮಂದಿರದ ಆಡಳಿತ ಮಂಡಳಿ ಸದಸ್ಯರು ವೈಯಕ್ತಿಕ ಹಿತಾಸಕ್ತಿ ಸಾಧಿಸಲು ದೇವಸ್ಥಾನವನ್ನು ವೇದಿಕೆಯಾಗಿ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರ್ಕಾರ ದೇವಸ್ಥಾನಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಕರ್ನಾಟಕ ಸಂಗ್ರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಂಜೀವ ಧುಮಕ್ಕನಾಳ ಆಗ್ರಹಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಾರ್ವಜನಿಕರು ನೀಡುವ ಹಣದ ಕಾಣಿಕೆಯನ್ನು ಆ ಮಂದಿರದ ಆಡಳಿತ ಮಂಡಳಿ ಸದಸ್ಯರು ವೈಯಕ್ತಿಕ ಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಮಂಡಳಿಯ ಗೌರವ ಕಾರ್ಯದರ್ಶಿ ವೆಂಕಟರಾವ ಕುಲಕರ್ಣಿ ಸಹಕಾರಿ ಇಲಾಖೆಯಲ್ಲಿದ್ದು ನಿವೃತ್ತಿಯಾಗಿದ್ದಾರೆ. ಅವರನ್ನು ನೇಮಕ ಮಾಡಿಕೊಂಡಿದ್ದು ಕಾನೂನಿಗೆ ವಿರುದ್ಧವಾಗಿದೆ. ಈ ಎಲ್ಲ ವಿಷಯಗಳ ಕುರಿತು ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಶಾಸಕ ಬದ್ಧ ವಿಚಾರಣೆ ನಡೆಸಿ ವರದಿ ನೀಡಿದ್ದಾರೆ. ಆದ್ದರಿಂದ ಆಡಳಿತಾಧಿಕಾರಿಯನ್ನು ನೇಮಿಸಬೇಕು’ ಎಂದು ಒತ್ತಾಯಿಸಿದರು.</p>.<p>ಧುಮ್ಮಕ್ಕನಾಳ ಆರೋಪಕ್ಕೆ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಶಿರಡಿ ಸಾಯಿ ಸದ್ಭಕ್ತ ಮಂಡಳಿ ‘ಸಹಾಯಕ ಸಂಘಗಳ ನಿಬಂಧಕರು ವಿಚಾರಣೆ ಮಾಡಿದ್ದಾರೆ ಹೊರತು; ಅದು ಶಾಸನಬದ್ಧ ಅಲ್ಲ. ಮೇ 5ರಂದು ನಿಬಂಧಕರು ಪತ್ರ ಬರೆದು ನಾಲ್ಕು ಅಂಶಗಳನ್ನು ಸರಿಪಡಿಸುವಂತೆ ಅಷ್ಟೇ ತಿಳಿಸಿದ್ದಾರೆ. ಈಗಿರುವ ಆಡಳಿಯ ಮಂಡಳಿ ನಿಯಮಕ್ಕೆ ಅನುಗುಣವಾಗಿಯೇ ಕೆಲಸ ಮಾಡುತ್ತಿದೆ. ಆದ್ದರಿಂದ ಭಕ್ತರು ಸುಳ್ಳು ಆರೋಪಗಳಿಗೆ ಕಿವಿಗೊಡಬಾರದು’ ಎಂದು ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದ ಹಳೇ ಕೋರ್ಟ್ ವೃತ್ತದಲ್ಲಿರುವ ಸಾಯಿ ಮಂದಿರದ ಆಡಳಿತ ಮಂಡಳಿ ಸದಸ್ಯರು ವೈಯಕ್ತಿಕ ಹಿತಾಸಕ್ತಿ ಸಾಧಿಸಲು ದೇವಸ್ಥಾನವನ್ನು ವೇದಿಕೆಯಾಗಿ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರ್ಕಾರ ದೇವಸ್ಥಾನಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಕರ್ನಾಟಕ ಸಂಗ್ರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಂಜೀವ ಧುಮಕ್ಕನಾಳ ಆಗ್ರಹಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಾರ್ವಜನಿಕರು ನೀಡುವ ಹಣದ ಕಾಣಿಕೆಯನ್ನು ಆ ಮಂದಿರದ ಆಡಳಿತ ಮಂಡಳಿ ಸದಸ್ಯರು ವೈಯಕ್ತಿಕ ಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಮಂಡಳಿಯ ಗೌರವ ಕಾರ್ಯದರ್ಶಿ ವೆಂಕಟರಾವ ಕುಲಕರ್ಣಿ ಸಹಕಾರಿ ಇಲಾಖೆಯಲ್ಲಿದ್ದು ನಿವೃತ್ತಿಯಾಗಿದ್ದಾರೆ. ಅವರನ್ನು ನೇಮಕ ಮಾಡಿಕೊಂಡಿದ್ದು ಕಾನೂನಿಗೆ ವಿರುದ್ಧವಾಗಿದೆ. ಈ ಎಲ್ಲ ವಿಷಯಗಳ ಕುರಿತು ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಶಾಸಕ ಬದ್ಧ ವಿಚಾರಣೆ ನಡೆಸಿ ವರದಿ ನೀಡಿದ್ದಾರೆ. ಆದ್ದರಿಂದ ಆಡಳಿತಾಧಿಕಾರಿಯನ್ನು ನೇಮಿಸಬೇಕು’ ಎಂದು ಒತ್ತಾಯಿಸಿದರು.</p>.<p>ಧುಮ್ಮಕ್ಕನಾಳ ಆರೋಪಕ್ಕೆ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಶಿರಡಿ ಸಾಯಿ ಸದ್ಭಕ್ತ ಮಂಡಳಿ ‘ಸಹಾಯಕ ಸಂಘಗಳ ನಿಬಂಧಕರು ವಿಚಾರಣೆ ಮಾಡಿದ್ದಾರೆ ಹೊರತು; ಅದು ಶಾಸನಬದ್ಧ ಅಲ್ಲ. ಮೇ 5ರಂದು ನಿಬಂಧಕರು ಪತ್ರ ಬರೆದು ನಾಲ್ಕು ಅಂಶಗಳನ್ನು ಸರಿಪಡಿಸುವಂತೆ ಅಷ್ಟೇ ತಿಳಿಸಿದ್ದಾರೆ. ಈಗಿರುವ ಆಡಳಿಯ ಮಂಡಳಿ ನಿಯಮಕ್ಕೆ ಅನುಗುಣವಾಗಿಯೇ ಕೆಲಸ ಮಾಡುತ್ತಿದೆ. ಆದ್ದರಿಂದ ಭಕ್ತರು ಸುಳ್ಳು ಆರೋಪಗಳಿಗೆ ಕಿವಿಗೊಡಬಾರದು’ ಎಂದು ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>