ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಾರ್ವಜನಿಕರು ನೀಡುವ ಹಣದ ಕಾಣಿಕೆಯನ್ನು ಆ ಮಂದಿರದ ಆಡಳಿತ ಮಂಡಳಿ ಸದಸ್ಯರು ವೈಯಕ್ತಿಕ ಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಮಂಡಳಿಯ ಗೌರವ ಕಾರ್ಯದರ್ಶಿ ವೆಂಕಟರಾವ ಕುಲಕರ್ಣಿ ಸಹಕಾರಿ ಇಲಾಖೆಯಲ್ಲಿದ್ದು ನಿವೃತ್ತಿಯಾಗಿದ್ದಾರೆ. ಅವರನ್ನು ನೇಮಕ ಮಾಡಿಕೊಂಡಿದ್ದು ಕಾನೂನಿಗೆ ವಿರುದ್ಧವಾಗಿದೆ. ಈ ಎಲ್ಲ ವಿಷಯಗಳ ಕುರಿತು ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಶಾಸಕ ಬದ್ಧ ವಿಚಾರಣೆ ನಡೆಸಿ ವರದಿ ನೀಡಿದ್ದಾರೆ. ಆದ್ದರಿಂದ ಆಡಳಿತಾಧಿಕಾರಿಯನ್ನು ನೇಮಿಸಬೇಕು’ ಎಂದು ಒತ್ತಾಯಿಸಿದರು.