<p><strong>ತರ್ಲಘಟ್ಟಿ</strong> (ಗುಡಗೇರಿ): ಕುಂದಗೋಳ ತಾಲ್ಲೂಕಿನ ತರ್ಲಘಟ್ಟ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ರಾತ್ರಿ 300 ಅಡಿಯ ಬಾವಿಯೊಂದಕ್ಕೆ ಬಿದ್ದಿದ್ದು ಕುಂದಗೋಳದ ಅಗ್ನಿಶಾಮಕ ದಳದವರು ಸುರಕ್ಷಿತವಾಗಿ ವ್ಯಕ್ತಿಯನ್ನು ರಕ್ಷಿಸುವ ಘಟನೆ ಮಂಗಳವಾರ ರಾತ್ರಿ ಜರುಗಿದೆ.</p>.<p>ಗ್ರಾಮದ ಮಾಲತೇಶ ನೀಲಪ್ಪ ಮಾವನೂರ ಎಂಬ 16 ವಯಸ್ಸಿನ ವ್ಯಕ್ತಿಯನ್ನು ರಾತ್ರಿ 9.30ರ ಸುಮಾರು ಪಾಳುಬಿದ್ದ ಈ ಬಾವಿಗೆ ಬಿದ್ದಿರುವ ಕುರಿತು ಸ್ಥಳಿಯರು ಕುಂದಗೋಳ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. </p>.<p>ಕೂಡಲೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಗ್ಗ ಹಾಗೂ ಬುಟ್ಟಿಯ ಸಹಾಯದಿಂದ 300 ಅಡಿಯಲ್ಲಿ ಬಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದರು. </p>.<p> ‘ಈ ಬಾವಿಯಲ್ಲಿ ನೀರು ಇಲ್ಲದೆ ಇರುವುದರಿಂದ ಜನರು ವ್ಯರ್ಥವಾದ ಬಟ್ಟೆ ಮತ್ತಿತರ ವಸ್ತುಗಳನ್ನು ಹಾಕಿದ್ದರಿಂದ ಅದರ ಮೇಲೆ ಈ ವ್ಯಕ್ತಿ ಬಿದ್ದ ಪರಿಣಾಮ ಯಾವುದೆ ಗಂಭೀರ ಗಾಯಗಳಾಗಿಲ್ಲ. ಸ್ಥಳಿಯ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ‘ ಎಂದು ಅಗ್ನಿಶಾಮಕ ದಳದ ಅಧಿಕಾರಿ ವಿನಾಯಕ ದೊಡ್ಡವಾಡ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರ್ಲಘಟ್ಟಿ</strong> (ಗುಡಗೇರಿ): ಕುಂದಗೋಳ ತಾಲ್ಲೂಕಿನ ತರ್ಲಘಟ್ಟ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ರಾತ್ರಿ 300 ಅಡಿಯ ಬಾವಿಯೊಂದಕ್ಕೆ ಬಿದ್ದಿದ್ದು ಕುಂದಗೋಳದ ಅಗ್ನಿಶಾಮಕ ದಳದವರು ಸುರಕ್ಷಿತವಾಗಿ ವ್ಯಕ್ತಿಯನ್ನು ರಕ್ಷಿಸುವ ಘಟನೆ ಮಂಗಳವಾರ ರಾತ್ರಿ ಜರುಗಿದೆ.</p>.<p>ಗ್ರಾಮದ ಮಾಲತೇಶ ನೀಲಪ್ಪ ಮಾವನೂರ ಎಂಬ 16 ವಯಸ್ಸಿನ ವ್ಯಕ್ತಿಯನ್ನು ರಾತ್ರಿ 9.30ರ ಸುಮಾರು ಪಾಳುಬಿದ್ದ ಈ ಬಾವಿಗೆ ಬಿದ್ದಿರುವ ಕುರಿತು ಸ್ಥಳಿಯರು ಕುಂದಗೋಳ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. </p>.<p>ಕೂಡಲೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಗ್ಗ ಹಾಗೂ ಬುಟ್ಟಿಯ ಸಹಾಯದಿಂದ 300 ಅಡಿಯಲ್ಲಿ ಬಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದರು. </p>.<p> ‘ಈ ಬಾವಿಯಲ್ಲಿ ನೀರು ಇಲ್ಲದೆ ಇರುವುದರಿಂದ ಜನರು ವ್ಯರ್ಥವಾದ ಬಟ್ಟೆ ಮತ್ತಿತರ ವಸ್ತುಗಳನ್ನು ಹಾಕಿದ್ದರಿಂದ ಅದರ ಮೇಲೆ ಈ ವ್ಯಕ್ತಿ ಬಿದ್ದ ಪರಿಣಾಮ ಯಾವುದೆ ಗಂಭೀರ ಗಾಯಗಳಾಗಿಲ್ಲ. ಸ್ಥಳಿಯ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ‘ ಎಂದು ಅಗ್ನಿಶಾಮಕ ದಳದ ಅಧಿಕಾರಿ ವಿನಾಯಕ ದೊಡ್ಡವಾಡ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>