ಗ್ರಾಮಸ್ಥರ ಅಸಮಾಧಾನ
ಬೆಳಿಗ್ಗೆ ಒಂಬತ್ತರಿಂದಲೇ ಸಚಿವರನ್ನು ಸ್ವಾಗತಿಸಲು ಸಿದ್ಧಾರೂಢ ಮಠದಲ್ಲಿ ಗ್ರಾಮಸ್ಥರು ಒಂದೆಡೆ ಸೇರಿದ್ದರು. ಜಿಲ್ಲಾಡಳಿತ, ತಾಲ್ಲೂಕಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದ್ದರು. ಆದರೆ ಮಧ್ಯಾಹ್ನ 12 ಆದರೂ ಸಚಿವರು ಬಂದಿರಲಿಲ್ಲ. ಬೆಳಿಗ್ಗೆಯಿಂದ ಸಚಿವರ ಸ್ವಾಗತಕ್ಕೆ ಕಾದು ಕೂತಿದ್ದೇವೆ. ಆದರೆ, ಬಿಸಿಲು ನೆತ್ತಿಗೇರಿ, ಊಟದ ಸಮಯವಾದರೂ ಸಚಿವರು ಬಂದಿಲ್ಲ ಎಂದು ಕೆಲವು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.