ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ತೆರಿಗೆ ಹೆಚ್ಚಳ ರದ್ದತಿಗೆ ಆಗ್ರಹಿಸಿ ಆಪ್ ಪ್ರತಿಭಟನೆ

Last Updated 12 ಜೂನ್ 2020, 8:26 IST
ಅಕ್ಷರ ಗಾತ್ರ

ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಹೆಚ್ಚಳ ಹಿಂತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಮತ್ತು ಧಾರವಾಡ ಜಿಲ್ಲಾ ಸಚಿವರಿಗೆ ಆಸ್ತಿ ಕರ ಹಿಂಪಡೆಯುವಂತೆ ಜನಸಾಮಾನ್ಯರು, ಸಂಘಟನೆಗಳು ಹಾಗೂ ಎಎಪಿ ಅನೇಕ ಮನವಿಗಳನ್ನು ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ದೂರಿದರು.

ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಕರ ಹೆಚ್ಚಿಸುವುದು ಸರಿಯಲ್ಲ ಎಂದು ಟೀಕಿಸಿದರು.

ಸಂತೋಷ ನರಗುಂದ,ವಿಕಾಸ ಸೊಪ್ಪಿನ, ಪ್ರತಿಭಾ, ಶಶಿಕುಮಾರ ಸುಳ್ಳದ, ವಿವೇಕಾನಂದ ಸಾಲಿನ್ಸ್, ಶಿವಲಿಂಗಪ್ಪ ಜಡೆಣ್ಣವರ, ವಿಜಯ ಸಾಯಿ, ತ್ಯಾಗರಾಜ ಅಲ್ಲಂಪಟ್ಟಿ, ಅನಂತಕುಮಾರ ಭಾರತೀಯ, ಲಕ್ಷ್ಮಣ ರಾಠೋಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT