ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ‘ಜಾಗ ಅತಿಕ್ರಮಣದ ಬಗ್ಗೆ ಹಿಂದೆಯೇ ದೂರುಗಳು ಬಂದಿದ್ದವು. ಸಂಬಂಧಿಸಿದವರಿಗೆ ನೋಟಿಸ್ ಕೂಡ ನೀಡಲಾಗಿತ್ತು. ಈಗಲೂ ಸಾಕಷ್ಟು ದೂರುಗಳು ಬರುತ್ತಿದ್ದು, ಅವರಿಗೂ ನೋಟಿಸ್ ನೀಡಲಾಗುತ್ತಿದೆ. ಹಂತಹಂತವಾಗಿ ಅತಿಕ್ರಮಣ ತೆರವು ಕಾರ್ಯ ಮುಂದುವರಿಯಲಿದೆ’ ಎಂದರು.