ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಹುಬ್ಬಳ್ಳಿ– ಚೆನ್ನೈ ನೂತನ ರೈಲಿಗೆ ಚಾಲನೆ ನೀಡಿ ಮಾತನಾಡಿದ ಅವರು ‘ಹೊರ ರಾಜ್ಯದ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಬಂದು ರೈಲ್ವೆ ಪರೀಕ್ಷೆ ಬರೆಯುತ್ತಾರೆ. ಆದರೆ, ನಮ್ಮ ರಾಜ್ಯದವರು ಹೊರ ರಾಜ್ಯದಲ್ಲಿ ಪರೀಕ್ಷೆ ಬರೆಯಲು ಆಸಕ್ತಿ ತೋರಿಸುತ್ತಿಲ್ಲ. ರೈಲ್ವೆಯಲ್ಲಿ ನೌಕರಿಗೆ ಸಾಕಷ್ಟು ಅವಕಾಶಗಳಿದ್ದರೂ ಬಳಸಿಕೊಳ್ಳುತ್ತಿಲ್ಲ. ಆದ್ದರಿಂದ ಹುಬ್ಬಳ್ಳಿಗೆ ಕಚೇರಿ ಸ್ಥಳಾಂತರಿಸಿದರೆ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದಷ್ಟು ಬೇಗನೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.