<p><strong>ಕುಂದಗೋಳ (ಧಾರವಾಡ ಜಿಲ್ಲೆ):</strong> ತಾಲ್ಲೂಕಿನ ರಾಮನಕೊಪ್ಪ ಗ್ರಾಮದ ಮನೆಯೊಂದರಲ್ಲಿ ಆದಾಯ ತೆರಿಗೆ ಅಧಿಕಾರಿಗಳು, ವಿಚಕ್ಷಣ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ದಾಖಲೆ ಇಲ್ಲದ ₹2ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.</p>.<p>ತಾಲ್ಲೂಕಿನ ರಾಮನಕೊಪ್ಪದ ಚೆಕ್ಪೋಸ್ಟ್ನಲ್ಲಿ ನಿಲ್ಲಿಸದೆ ಸಾಗಿದ ಕಾರೊಂದನ್ನು ಅಧಿಕಾರಿಗಳು, ಸಿಬ್ಬಂದಿ ಹಿಂಬಾಲಿಸಿದ್ದಾರೆ. ವ್ಯಕ್ತಿಯೊಬ್ಬ ಬ್ಯಾಗುಗಳೊಂದಿಗೆ ಹೋದ ಮನೆ ಮೇಲೆ ದಾಳಿ ಮಾಡಿ ನಗದು ವಶಪಡಿಸಿಕೊಂಡಿದ್ದಾರೆ.</p>.<p>ಭೂಮಿ ಖರೀದಿ ವಿಚಾರವಾಗಿ ಒಬ್ಬರಿಗೆ ಹಣ ನೀಡಲು ಬಂದಿದ್ದಾಗಿ ವ್ಯಕ್ತಿ ತಿಳಿಸಿದ್ದಾರೆ. ಆದರೆ ಅದಕ್ಕೆ ಪೂರಕ ದಾಖಲೆಗಳನ್ನು ನೀಡಿಲ್ಲ ಎಂದು ತಿಳಿದುಬಂದಿದೆ.</p>.<p>ಜಿಲ್ಲಾ ಪೊಲಿಸ್ ವರಿಷ್ಠಾದಿಕಾರಿ ಗೋಪಾಲ ಬ್ಯಾಕೋಡ, ನಾರಾಯಣ ಭರಮನಿ, ಶಿವಾನಂದ ಕಟಗಿ, ಇನ್ಸ್ಪೆಕ್ಟರ್ ಮರುಗೇಶ್ ಚೆನ್ನಣ್ಣವರ, ಶಿವಾನಂದ ಅಂಬಿಗೇರ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಗೋಳ (ಧಾರವಾಡ ಜಿಲ್ಲೆ):</strong> ತಾಲ್ಲೂಕಿನ ರಾಮನಕೊಪ್ಪ ಗ್ರಾಮದ ಮನೆಯೊಂದರಲ್ಲಿ ಆದಾಯ ತೆರಿಗೆ ಅಧಿಕಾರಿಗಳು, ವಿಚಕ್ಷಣ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ದಾಖಲೆ ಇಲ್ಲದ ₹2ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.</p>.<p>ತಾಲ್ಲೂಕಿನ ರಾಮನಕೊಪ್ಪದ ಚೆಕ್ಪೋಸ್ಟ್ನಲ್ಲಿ ನಿಲ್ಲಿಸದೆ ಸಾಗಿದ ಕಾರೊಂದನ್ನು ಅಧಿಕಾರಿಗಳು, ಸಿಬ್ಬಂದಿ ಹಿಂಬಾಲಿಸಿದ್ದಾರೆ. ವ್ಯಕ್ತಿಯೊಬ್ಬ ಬ್ಯಾಗುಗಳೊಂದಿಗೆ ಹೋದ ಮನೆ ಮೇಲೆ ದಾಳಿ ಮಾಡಿ ನಗದು ವಶಪಡಿಸಿಕೊಂಡಿದ್ದಾರೆ.</p>.<p>ಭೂಮಿ ಖರೀದಿ ವಿಚಾರವಾಗಿ ಒಬ್ಬರಿಗೆ ಹಣ ನೀಡಲು ಬಂದಿದ್ದಾಗಿ ವ್ಯಕ್ತಿ ತಿಳಿಸಿದ್ದಾರೆ. ಆದರೆ ಅದಕ್ಕೆ ಪೂರಕ ದಾಖಲೆಗಳನ್ನು ನೀಡಿಲ್ಲ ಎಂದು ತಿಳಿದುಬಂದಿದೆ.</p>.<p>ಜಿಲ್ಲಾ ಪೊಲಿಸ್ ವರಿಷ್ಠಾದಿಕಾರಿ ಗೋಪಾಲ ಬ್ಯಾಕೋಡ, ನಾರಾಯಣ ಭರಮನಿ, ಶಿವಾನಂದ ಕಟಗಿ, ಇನ್ಸ್ಪೆಕ್ಟರ್ ಮರುಗೇಶ್ ಚೆನ್ನಣ್ಣವರ, ಶಿವಾನಂದ ಅಂಬಿಗೇರ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>