<p><strong>ಹುಬ್ಬಳ್ಳಿ:</strong> ‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವವರು ದೇಶಕ್ಕೆ ಕಠಿಣ ಸಮಯ ಬಂದಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಕಠಿಣ ಸಮಯ ಬಂದಿರುವುದು ಅವರಿಗೇ ಹೊರತು; ದೇಶಕಲ್ಲ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಪ್ರಚಾರ ಪ್ರಮುಖ ಅರುಣಕುಮಾರ್ ಅಭಿಪ್ರಾಯಪಟ್ಟರು.</p>.<p>ಸಮರ್ಥ ಭಾರತ ಟ್ರಸ್ಟ್ ವತಿಯಿಂದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಸೋಮವಾರ ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಏರ್ಪಡಿಸಲಾಗಿದ್ದ ಜನಜಾಗರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕಾಯ್ದೆಯನ್ನು ನೆಪವಾಗಿಟ್ಟುಕೊಂಡು ಅನೇಕರು ಹೋರಾಟ ನಡೆಸುತ್ತಿದ್ದಾರೆ. ಹೋರಾಟದ ಹಿಂದೆ ವೋಟ್ ಬ್ಯಾಂಕ್ ರಾಜಕಾರಣವಿದೆ’ ಎಂದರು.</p>.<p>‘ಎಸ್ಎಫ್ಐ, ಪಿಎಫ್ಐ, ಎನ್ಎಸ್ಯುಐ, ಅಂಬೇಡ್ಕರ್ ವಿದ್ಯಾರ್ಥಿ ಸಂಘ, ಪೆರಿಯಾರ್ ವಿದ್ಯಾರ್ಥಿ ಸಂಘಟನೆಗಳು ಕಳೆದ ಆರು ವರ್ಷಗಳಿಂದ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆಸಿವೆ’ ಎಂದು ಆರೋಪಿಸಿದರು.</p>.<p>‘ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ಇದೇ ಮೊದಲಲ್ಲ. ಈ ಹಿಂದೆ ನೆಹರೂ, ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲೂ ತಿದ್ದುಪಡಿ ಮಾಡಲಾಗಿದೆ. ಆಗ ಇಲ್ಲದ ವಿರೋಧ ಈಗ ಏಕೆ’ ಎಂದು ಅವರು ಪ್ರಶ್ನಿಸಿದರು.</p>.<p>‘ದೇಶದ ಸುಭದ್ರತೆಗಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಲಾಗಿದೆ. ಈ ಹಿಂದೆ ಆಗಿರುವ ಐತಿಹಾಸಿಕ ತಪ್ಪನ್ನು ತಿದ್ದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಇದನ್ನು ವಿರೋಧಿಸುವವರು ದೇಶವನ್ನು ವಿರೋಧಿಸಿದಂತೆ’ ಎಂದು ಹೇಳಿದರು.</p>.<p>ಆರ್ಎಸ್ಎಸ್ ಹುಬ್ಬಳ್ಳಿ ಮಹಾನಗರದ ಸಂಘ ಚಾಲಕ ಶಿವಾನಂದ ದೇಸಾಯಿ, ಪವನ್ ಸಾರಥಿ ಉಪಸ್ಥಿತರಿದ್ದರು.</p>.<p>ಭದ್ರತೆ: ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸವಾಯಿ ಗಂದರ್ವ ಸಭಾಂಗಣಕ್ಕೆ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವವರು ದೇಶಕ್ಕೆ ಕಠಿಣ ಸಮಯ ಬಂದಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಕಠಿಣ ಸಮಯ ಬಂದಿರುವುದು ಅವರಿಗೇ ಹೊರತು; ದೇಶಕಲ್ಲ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಪ್ರಚಾರ ಪ್ರಮುಖ ಅರುಣಕುಮಾರ್ ಅಭಿಪ್ರಾಯಪಟ್ಟರು.</p>.<p>ಸಮರ್ಥ ಭಾರತ ಟ್ರಸ್ಟ್ ವತಿಯಿಂದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಸೋಮವಾರ ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಏರ್ಪಡಿಸಲಾಗಿದ್ದ ಜನಜಾಗರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕಾಯ್ದೆಯನ್ನು ನೆಪವಾಗಿಟ್ಟುಕೊಂಡು ಅನೇಕರು ಹೋರಾಟ ನಡೆಸುತ್ತಿದ್ದಾರೆ. ಹೋರಾಟದ ಹಿಂದೆ ವೋಟ್ ಬ್ಯಾಂಕ್ ರಾಜಕಾರಣವಿದೆ’ ಎಂದರು.</p>.<p>‘ಎಸ್ಎಫ್ಐ, ಪಿಎಫ್ಐ, ಎನ್ಎಸ್ಯುಐ, ಅಂಬೇಡ್ಕರ್ ವಿದ್ಯಾರ್ಥಿ ಸಂಘ, ಪೆರಿಯಾರ್ ವಿದ್ಯಾರ್ಥಿ ಸಂಘಟನೆಗಳು ಕಳೆದ ಆರು ವರ್ಷಗಳಿಂದ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆಸಿವೆ’ ಎಂದು ಆರೋಪಿಸಿದರು.</p>.<p>‘ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ಇದೇ ಮೊದಲಲ್ಲ. ಈ ಹಿಂದೆ ನೆಹರೂ, ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲೂ ತಿದ್ದುಪಡಿ ಮಾಡಲಾಗಿದೆ. ಆಗ ಇಲ್ಲದ ವಿರೋಧ ಈಗ ಏಕೆ’ ಎಂದು ಅವರು ಪ್ರಶ್ನಿಸಿದರು.</p>.<p>‘ದೇಶದ ಸುಭದ್ರತೆಗಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತರಲಾಗಿದೆ. ಈ ಹಿಂದೆ ಆಗಿರುವ ಐತಿಹಾಸಿಕ ತಪ್ಪನ್ನು ತಿದ್ದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಇದನ್ನು ವಿರೋಧಿಸುವವರು ದೇಶವನ್ನು ವಿರೋಧಿಸಿದಂತೆ’ ಎಂದು ಹೇಳಿದರು.</p>.<p>ಆರ್ಎಸ್ಎಸ್ ಹುಬ್ಬಳ್ಳಿ ಮಹಾನಗರದ ಸಂಘ ಚಾಲಕ ಶಿವಾನಂದ ದೇಸಾಯಿ, ಪವನ್ ಸಾರಥಿ ಉಪಸ್ಥಿತರಿದ್ದರು.</p>.<p>ಭದ್ರತೆ: ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸವಾಯಿ ಗಂದರ್ವ ಸಭಾಂಗಣಕ್ಕೆ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>