<p><strong>ಮುಧೋಳ</strong> (<strong>ಬಾಗಲಕೋಟೆ ಜಿಲ್ಲೆ)</strong>: ‘ಧರ್ಮ ಮತ್ತು ಸಮುದಾಯಗಳ ನಡುವೆ ಕಂದಕ ಸೃಷ್ಠಿಸುವಲ್ಲಿ ನಿರತವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ದೇಶಕ್ಕೆ ಮಾರಕವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>‘ಬಿಜೆಪಿ, ಆರ್ಎಸ್ಎಸ್ನಿಂದ ಜನರು ಅಂತರ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ, ಪಶ್ಚಾತಾಪ ಪಡಬೇಕಾಗುತ್ತದೆ. ಆರ್ಎಸ್ಎಸ್ನ ಬಿ.ಎಲ್. ಸಂತೋಷ ಅಂಥವರು ಬಿಜೆಪಿಯನ್ನು ಹತೋಟಿಯಲ್ಲಿ ಇರಿಸಿಕೊಂಡಿದ್ದಾರೆ. ಹಿಂಬಾಗಿಲಿನಿಂದ ಆಡಳಿತ ನಡೆಸಿ, ಪ್ರಧಾನಿಯನ್ನು ನಿಯಂತ್ರಿಸುತ್ತಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಿಜೆಪಿಗೆ ದಲಿತರು ಹಾಗೂ ಹಿಂದುಳಿದ ಜನಾಂಗದವರ ಬಗ್ಗೆ ಯಾವುದೇ ಒಳ್ಳೆಯ ಭಾವನೆ ಇಲ್ಲ. ಬಿಜೆಪಿಗೆ ಮುಂದಿನ ದಿನಮಾನದಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗದವರು ತಕ್ಕ ಪಾಠ ಕಲಿಸುವುದು ಸತ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ</strong> (<strong>ಬಾಗಲಕೋಟೆ ಜಿಲ್ಲೆ)</strong>: ‘ಧರ್ಮ ಮತ್ತು ಸಮುದಾಯಗಳ ನಡುವೆ ಕಂದಕ ಸೃಷ್ಠಿಸುವಲ್ಲಿ ನಿರತವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ದೇಶಕ್ಕೆ ಮಾರಕವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p>.<p>‘ಬಿಜೆಪಿ, ಆರ್ಎಸ್ಎಸ್ನಿಂದ ಜನರು ಅಂತರ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ, ಪಶ್ಚಾತಾಪ ಪಡಬೇಕಾಗುತ್ತದೆ. ಆರ್ಎಸ್ಎಸ್ನ ಬಿ.ಎಲ್. ಸಂತೋಷ ಅಂಥವರು ಬಿಜೆಪಿಯನ್ನು ಹತೋಟಿಯಲ್ಲಿ ಇರಿಸಿಕೊಂಡಿದ್ದಾರೆ. ಹಿಂಬಾಗಿಲಿನಿಂದ ಆಡಳಿತ ನಡೆಸಿ, ಪ್ರಧಾನಿಯನ್ನು ನಿಯಂತ್ರಿಸುತ್ತಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಿಜೆಪಿಗೆ ದಲಿತರು ಹಾಗೂ ಹಿಂದುಳಿದ ಜನಾಂಗದವರ ಬಗ್ಗೆ ಯಾವುದೇ ಒಳ್ಳೆಯ ಭಾವನೆ ಇಲ್ಲ. ಬಿಜೆಪಿಗೆ ಮುಂದಿನ ದಿನಮಾನದಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗದವರು ತಕ್ಕ ಪಾಠ ಕಲಿಸುವುದು ಸತ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>