<p><strong>ಧಾರವಾಡ: ‘</strong>ಆರ್ಎಸ್ಎಸ್ ಜನಪ್ರಿಯತೆಯನ್ನು ಸಿ.ಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಪಥಸಂಚಲನಕ್ಕೆ ಅಡ್ಡಿಪಡಿಸಲು ಯತ್ನಿಸಿದರು’ ಎಂದು ಸಂಸದ ಜಗದೀಶ ಶೆಟ್ಟರ್ ದೂರಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಿತ್ತಾಪುರದಲ್ಲಿ ಪಥಸಂಚಲನ ತಡೆಯಲು ಪ್ರಯತ್ನಿಸಿದರು. ಪಥಸಂಚಲನಕ್ಕೆ ಹೈಕೋರ್ಟ್ ಅವಕಾಶ ನೀಡಿದೆ. ಕಾನೂನು ಬಾಹಿರವಾಗಿದ್ದರೆ, ಅನುಮತಿ ನೀಡುತ್ತಿರಲಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು’ಎಂದರು.</p>.<p>‘ಹಿಂದೂ ಹಾಗೂ ಲಿಂಗಾಯತ ಸಮಾಜವನ್ನು ಒಡೆಯುವುದು ಸಿದ್ದರಾಮಯ್ಯ ಉದ್ದೇಶವಾಗಿದೆ. ಆರ್ಎಸ್ಎಸ್ ಹಿಂದುತ್ವ ಮತ್ತು ರಾಷ್ಟ್ರ ಕಟ್ಟುವ ಕಾರ್ಯ ಮಾಡುತ್ತಿದೆ. ಎದುರು ಹಾಕಿಕೊಂಡರೆ ಭಸ್ಮವಾಗುತ್ತಿರಿ’ ಎಂದು ಎಚ್ಚರಿಸಿದರು.</p>.<p>‘ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಸರ್ಕಾರಿ ನೌಕರರಿಗೆ ಸಂಬಳ ನೀಡುತ್ತಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ವಿಚಾರಗಳನ್ನು ಮರೆಮಾಚಲು ಜನರ ಗಮನ ಬೇರೆಡೆ ಸೆಳೆಯಲು ಹುನ್ನಾರ ನಡೆಸಿದ್ದಾರೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ: ‘</strong>ಆರ್ಎಸ್ಎಸ್ ಜನಪ್ರಿಯತೆಯನ್ನು ಸಿ.ಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಪಥಸಂಚಲನಕ್ಕೆ ಅಡ್ಡಿಪಡಿಸಲು ಯತ್ನಿಸಿದರು’ ಎಂದು ಸಂಸದ ಜಗದೀಶ ಶೆಟ್ಟರ್ ದೂರಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಿತ್ತಾಪುರದಲ್ಲಿ ಪಥಸಂಚಲನ ತಡೆಯಲು ಪ್ರಯತ್ನಿಸಿದರು. ಪಥಸಂಚಲನಕ್ಕೆ ಹೈಕೋರ್ಟ್ ಅವಕಾಶ ನೀಡಿದೆ. ಕಾನೂನು ಬಾಹಿರವಾಗಿದ್ದರೆ, ಅನುಮತಿ ನೀಡುತ್ತಿರಲಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು’ಎಂದರು.</p>.<p>‘ಹಿಂದೂ ಹಾಗೂ ಲಿಂಗಾಯತ ಸಮಾಜವನ್ನು ಒಡೆಯುವುದು ಸಿದ್ದರಾಮಯ್ಯ ಉದ್ದೇಶವಾಗಿದೆ. ಆರ್ಎಸ್ಎಸ್ ಹಿಂದುತ್ವ ಮತ್ತು ರಾಷ್ಟ್ರ ಕಟ್ಟುವ ಕಾರ್ಯ ಮಾಡುತ್ತಿದೆ. ಎದುರು ಹಾಕಿಕೊಂಡರೆ ಭಸ್ಮವಾಗುತ್ತಿರಿ’ ಎಂದು ಎಚ್ಚರಿಸಿದರು.</p>.<p>‘ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಸರ್ಕಾರಿ ನೌಕರರಿಗೆ ಸಂಬಳ ನೀಡುತ್ತಿಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ವಿಚಾರಗಳನ್ನು ಮರೆಮಾಚಲು ಜನರ ಗಮನ ಬೇರೆಡೆ ಸೆಳೆಯಲು ಹುನ್ನಾರ ನಡೆಸಿದ್ದಾರೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>