ಧಾರವಾಡ: ‘ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ದುರಾಡಳಿತ ನಡೆದಿದೆ. ಕುಲಪತಿ, ಕುಲಸಚಿವರು ಸೇರಿದಂತೆ ವಿಶ್ವವಿದ್ಯಾಲಯಗಳ ಉನ್ನತ ಹುದ್ದೆ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಹೊಸ ಶಿಕ್ಷಣ ನೀತಿ ಬದಲು, ಹಿಂದಿನ ಶಿಕ್ಷಣ ವ್ಯವಸ್ಥೆಗೆ ಸರ್ಕಾರ ಮೊದಲು ಸೌಲಭ್ಯ ಕಲ್ಪಿಸಲಿ’ ಎಂದು ಕೆ.ಪಿ.ಸಿ.ಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಒತ್ತಾಯಿಸಿದರು.