ಈ ನಿಯಮಗಳನ್ನು ಸರಳೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದ್ದರೂ, ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ, ಕಟ್ಟಡ ಸುರಕ್ಷತಾ ನಿಯಮಕ್ಕೆ ಸಂಬಂಧಿಸಿದಂತೆ ಯಾವುದೇ ಶುಲ್ಕವನ್ನು ಕಟ್ಟದೆ ಇರಲು ನಿರ್ಧರಿಸಲಾಗಿದೆ.ದ್ವಂದ್ವ ನಿಯಮ ಖಂಡಿಸಿ ರಾಜ್ಯದಾದ್ಯಂತ ಶಾಲಾ– ಕಾಲೇಜುಗಳಿಂದ ಪತ್ರ ಚಳವಳಿ ಮತ್ತು ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಮುಂಬರುವ ದಿನಗಳಲ್ಲಿ ಒಂದು ದಿನ ಸಾಂಕೇತಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.