ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಕ್ಷತಾ ನಿಯಮ; ತಾರತಮ್ಯಕ್ಕೆ ವಿರೋಧ

Last Updated 2 ಜನವರಿ 2022, 3:16 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅಗ್ನಿ ಸುರಕ್ಷತಾ ಕ್ರಮಗಳ ಅಳವಡಿಕೆಯ ನಿಮಯಗಳನ್ನು ಖಾಸಗಿ ಶಾಲೆಗಳಿಗೆ ಕಡ್ಡಾಯ ಮಾಡಿ, ಸರ್ಕಾರಿ ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಈ ತಾರತಮ್ಯ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಆಗ್ರಹಿಸಿದೆ.

ಈ ನಿಯಮಗಳನ್ನು ಸರಳೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದ್ದರೂ, ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ, ಕಟ್ಟಡ ಸುರಕ್ಷತಾ ನಿಯಮಕ್ಕೆ ಸಂಬಂಧಿಸಿದಂತೆ ಯಾವುದೇ ಶುಲ್ಕವನ್ನು ಕಟ್ಟದೆ ಇರಲು ನಿರ್ಧರಿಸಲಾಗಿದೆ.ದ್ವಂದ್ವ ನಿಯಮ ಖಂಡಿಸಿ ರಾಜ್ಯದಾದ್ಯಂತ ಶಾಲಾ– ಕಾಲೇಜುಗಳಿಂದ ಪತ್ರ ಚಳವಳಿ ಮತ್ತು ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಮುಂಬರುವ ದಿನಗಳಲ್ಲಿ ಒಂದು ದಿನ ಸಾಂಕೇತಿಕ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಜಿ.ಆರ್‌. ಭಟ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT