<p><strong>ಕಲಘಟಗಿ</strong>: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ತಾಲ್ಲೂಕಿನ ಸಂಗೇದೇವರಕೊಪ್ಪ ಗ್ರಾಮದ ಶಾಲ್ಮಲಾ ಹಾಗೂ ಬೇಡ್ತಿ ನದಿಗಳ ಕೂಡಲ ಸಂಗಮ ಪವಿತ್ರ ಕ್ಷೇತ್ರದಲ್ಲಿ ನಡೆಯುವ ಸಂಗಮೇಶ್ವರ ಬಸವಣ್ಣ ದೇವರ ಜಾತ್ರಾ ರಥೋತ್ಸವ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆ ದೇವಸ್ಥಾನದ ಅರ್ಚಕರಿಂದ ಬಸವಣ್ಣ ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತರು ಪೂಜೆ ಸಲ್ಲಿಸಿದರು.</p>.<p>ಜಾತ್ರೆ ಅಂಗವಾಗಿ ಬಸವಣ್ಣ ದೇವರ ರಥೋತ್ಸವಕ್ಕೆ ಮೊದಲೇ ರುದ್ರಾಕ್ಷಿ, ಹುಮಾಲೆ ಹಾಗೂ ವಿವಿಧ ವಸ್ತುಗಳಿಂದ ಅಲಂಕರಿಸಲಾಗಿತ್ತು.</p>.<p>ಮಡಕಿಹೊನ್ನಳ್ಳಿ ಗ್ರಾಮದ ಕಲ್ಮೇಶ್ವರ ದೇವರ ಆಗಮನದೊಂದಿಗೆ ಸಂಜೆ 4.30ಕ್ಕೆ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಮಂಗಳಾರತಿಯೊಂದಿಗೆ ರಾಯನಾಳ ವಿರಕ್ತ ಮಠದ ಅಭಿನವ ರೇವಣಸಿದ್ದೇಶ್ವರ ಸ್ವಾಮೀಜಿ, ಕಲಘಟಗಿ ಹನ್ನೆರಡು ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಗ್ರಾಮದ ಗುರು ಹಿರಿಯರು ಸೇರಿಕೊಂಡು ಚಾಲನೆ ನೀಡಿದರು.</p>.<p>ರಥೋತ್ಸವಕ್ಕೆ ಮುಂದೆ ಸಾಗುತ್ತಿದಂತೆ ನೆರೆದಿದ್ದ ಭಕ್ತರು ಬಸವೇಶ್ವರ, ಸಂಗಮೇಶ್ವರ ಮಹಾರಾಜಕೀ ಜೈ ಘೋಷ ಮೊಳಗಿಸಿ ರಥಕ್ಕೆ ಬಾಳೆಹಣ್ಣು ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. </p>.<p>ಮಲಕನಕೊಪ್ಪ, ಹಿಂಡಸಗೇರಿ, ಸಂಗೇದೇವರಕೊಪ್ಪ ಗ್ರಾಮದ ಕರಡಿ ಮಜಲುಗಳು, ಬಸವಣ್ಣ ದೇವರ ನಂದಿಕೋಲುಗಳು ಜಾತ್ರೆಗೆ ಮತ್ತಷ್ಟು ಮೆರಗು ತಂದುಕೊಟ್ಟವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಘಟಗಿ</strong>: ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ತಾಲ್ಲೂಕಿನ ಸಂಗೇದೇವರಕೊಪ್ಪ ಗ್ರಾಮದ ಶಾಲ್ಮಲಾ ಹಾಗೂ ಬೇಡ್ತಿ ನದಿಗಳ ಕೂಡಲ ಸಂಗಮ ಪವಿತ್ರ ಕ್ಷೇತ್ರದಲ್ಲಿ ನಡೆಯುವ ಸಂಗಮೇಶ್ವರ ಬಸವಣ್ಣ ದೇವರ ಜಾತ್ರಾ ರಥೋತ್ಸವ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆ ದೇವಸ್ಥಾನದ ಅರ್ಚಕರಿಂದ ಬಸವಣ್ಣ ದೇವರಿಗೆ ವಿಶೇಷ ಪೂಜೆ ನಡೆಯಿತು. ನಂತರ ಭಕ್ತರು ಪೂಜೆ ಸಲ್ಲಿಸಿದರು.</p>.<p>ಜಾತ್ರೆ ಅಂಗವಾಗಿ ಬಸವಣ್ಣ ದೇವರ ರಥೋತ್ಸವಕ್ಕೆ ಮೊದಲೇ ರುದ್ರಾಕ್ಷಿ, ಹುಮಾಲೆ ಹಾಗೂ ವಿವಿಧ ವಸ್ತುಗಳಿಂದ ಅಲಂಕರಿಸಲಾಗಿತ್ತು.</p>.<p>ಮಡಕಿಹೊನ್ನಳ್ಳಿ ಗ್ರಾಮದ ಕಲ್ಮೇಶ್ವರ ದೇವರ ಆಗಮನದೊಂದಿಗೆ ಸಂಜೆ 4.30ಕ್ಕೆ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಮಂಗಳಾರತಿಯೊಂದಿಗೆ ರಾಯನಾಳ ವಿರಕ್ತ ಮಠದ ಅಭಿನವ ರೇವಣಸಿದ್ದೇಶ್ವರ ಸ್ವಾಮೀಜಿ, ಕಲಘಟಗಿ ಹನ್ನೆರಡು ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿಗಳು ಹಾಗೂ ಗ್ರಾಮದ ಗುರು ಹಿರಿಯರು ಸೇರಿಕೊಂಡು ಚಾಲನೆ ನೀಡಿದರು.</p>.<p>ರಥೋತ್ಸವಕ್ಕೆ ಮುಂದೆ ಸಾಗುತ್ತಿದಂತೆ ನೆರೆದಿದ್ದ ಭಕ್ತರು ಬಸವೇಶ್ವರ, ಸಂಗಮೇಶ್ವರ ಮಹಾರಾಜಕೀ ಜೈ ಘೋಷ ಮೊಳಗಿಸಿ ರಥಕ್ಕೆ ಬಾಳೆಹಣ್ಣು ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. </p>.<p>ಮಲಕನಕೊಪ್ಪ, ಹಿಂಡಸಗೇರಿ, ಸಂಗೇದೇವರಕೊಪ್ಪ ಗ್ರಾಮದ ಕರಡಿ ಮಜಲುಗಳು, ಬಸವಣ್ಣ ದೇವರ ನಂದಿಕೋಲುಗಳು ಜಾತ್ರೆಗೆ ಮತ್ತಷ್ಟು ಮೆರಗು ತಂದುಕೊಟ್ಟವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>