<p><strong>ಹುಬ್ಬಳ್ಳಿ</strong>: ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ನೀಡುವ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ‘ಪ್ರಜಾವಾಣಿ’ಯ ಉಪಸಂಪಾದಕ ಸಿದ್ಧನಗೌಡ ಪಾಟೀಲ, ‘ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್’ ಜಾಹೀರಾತು ವಿಭಾಗದ ದಿವಾಕರ ಭಟ್ ಸೇರಿದಂತೆ 35 ಮಂದಿ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ 6 ಮಹಿಳೆಯರು ಆಯ್ಕೆಯಾಗಿದ್ದಾರೆ.</p>.<p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ‘ವಿವಿಧ ಕ್ಷೇತ್ರಗಳ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜನವರಿ 26ರಂದು ಸಂಜೆ 6 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದರು.</p>.<p>‘ಅಂದು ಮಧ್ಯಾಹ್ನ 2 ಗಂಟೆಗೆ ಬಾದಾಮಿಯ ಶ್ರೀನಿವಾಸ ದುರ್ಗಪ್ಪ ಮಾದರ ಅವರು ಸಂಗ್ರಾಣಿ ಕಲ್ಲು ಎತ್ತುವರು. ಸಿದ್ಧಾರೂಢ ಹೂಗಾರ ತಂಡದವರು ಮಲ್ಲಕಂಬ ಪ್ರದರ್ಶನ ನೀಡುವರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳುವರು’ ಎಂದು ತಿಳಿಸಿದರು. </p>.<p>‘ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ವಿಮಾನನಿಲ್ದಾಣಗಳಿಗೆ ಮಹನೀಯರ ಹೆಸರಿಡುವ ಕುರಿತು ಜ.26ರಂದು ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸದಿದ್ದರೆ, ಮುಂದಿನ ಹೋರಾಟದ ರೂಪುರೇಷೆಗಳನ್ನು ಇದೇ ಕಾರ್ಯಕ್ರಮದಲ್ಲಿ ಘೋಷಿಸಲಾಗುವುದು’ ಎಂದು ಹೇಳಿದರು.</p>.<p>ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ತಾಲೂರ, ವಿಜಯಕುಮಾರ ಅಪ್ಪಾಜಿ, ಗುರು ಚಲವಾದಿ, ಜಗದೀಶ ರಿತ್ತಿ, ಅಬ್ದುಲ್ ಮುನಾಫ್ ಐನಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ನೀಡುವ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ‘ಪ್ರಜಾವಾಣಿ’ಯ ಉಪಸಂಪಾದಕ ಸಿದ್ಧನಗೌಡ ಪಾಟೀಲ, ‘ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್’ ಜಾಹೀರಾತು ವಿಭಾಗದ ದಿವಾಕರ ಭಟ್ ಸೇರಿದಂತೆ 35 ಮಂದಿ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ 6 ಮಹಿಳೆಯರು ಆಯ್ಕೆಯಾಗಿದ್ದಾರೆ.</p>.<p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ‘ವಿವಿಧ ಕ್ಷೇತ್ರಗಳ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜನವರಿ 26ರಂದು ಸಂಜೆ 6 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದರು.</p>.<p>‘ಅಂದು ಮಧ್ಯಾಹ್ನ 2 ಗಂಟೆಗೆ ಬಾದಾಮಿಯ ಶ್ರೀನಿವಾಸ ದುರ್ಗಪ್ಪ ಮಾದರ ಅವರು ಸಂಗ್ರಾಣಿ ಕಲ್ಲು ಎತ್ತುವರು. ಸಿದ್ಧಾರೂಢ ಹೂಗಾರ ತಂಡದವರು ಮಲ್ಲಕಂಬ ಪ್ರದರ್ಶನ ನೀಡುವರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳುವರು’ ಎಂದು ತಿಳಿಸಿದರು. </p>.<p>‘ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ವಿಮಾನನಿಲ್ದಾಣಗಳಿಗೆ ಮಹನೀಯರ ಹೆಸರಿಡುವ ಕುರಿತು ಜ.26ರಂದು ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸದಿದ್ದರೆ, ಮುಂದಿನ ಹೋರಾಟದ ರೂಪುರೇಷೆಗಳನ್ನು ಇದೇ ಕಾರ್ಯಕ್ರಮದಲ್ಲಿ ಘೋಷಿಸಲಾಗುವುದು’ ಎಂದು ಹೇಳಿದರು.</p>.<p>ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ತಾಲೂರ, ವಿಜಯಕುಮಾರ ಅಪ್ಪಾಜಿ, ಗುರು ಚಲವಾದಿ, ಜಗದೀಶ ರಿತ್ತಿ, ಅಬ್ದುಲ್ ಮುನಾಫ್ ಐನಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>