ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹುಬ್ಬಳ್ಳಿಯ ಸೇವಾಲಾಲ್ ಬಂಜಾರ ಗುರುಪೀಠದ ತಿಪ್ಪೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಸೇವಾಲಾಲ್ ಅವರು ಬಂಜಾರ ಸಮಾಜವನ್ನು ಸಂಘಟಿಸಿ ಸಾಮಾಜಿಕ, ಆರ್ಥಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸ್ವರೂಪ ಗಟ್ಟಿಗೊಳ್ಳುವಂತೆ ಮಾಡಿದರು. ಅಹಿಂಸೆ, ದಯೆ, ಮಹಿಳಾ ಸಮಾನತೆ ಬೋಧಿಸಿದರು ಎಂದು ತಿಳಿಸಿದರು.