<p><strong>ಹುಬ್ಬಳ್ಳಿ</strong>: ‘ಮುಂದಿನ ಮುಖ್ಯಮಂತ್ರಿ ಎಂದು ಎಲ್ಲಾ ಕಡೆ ಕೂಗುತ್ತಾರೆ. ಆದರೆ, ಅದಕ್ಕೆ ಗುರು ಬಲ ಕೂಡಿಬರಬೇಕು. ಶನಿ ಆ ಕಡೆಯಿಂದ ಈ ಕಡೆಗೆ ಹೋಗಬೇಕು. ಕೆಪಿಸಿಸಿ ಅಧ್ಯಕ್ಷ ಆಗುವುದಕ್ಕೂ ಬಹಳಷ್ಟು ಜನರು ತಯಾರಿದ್ದಾರೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘30 ವರ್ಷದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಸುಧಾರಣೆ ಮಾಡಿದ್ದಾರೆ. ಆದರೆ, ಅವರ ವ್ಯಕ್ತಿತ್ವ ಅವರಿಗೆ, ಇವರದ್ದು ಇವರಿಗೆ ಇರುತ್ತದೆ’ ಎಂದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರೆ. ಅಲ್ಲಿ ಏನಾದರೂ ಕೆಲಸ ಇರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅವರೇ ಹೇಳಬೇಕು. ನಿಗಮ–ಮಂಡಳಿಗೆ ನೇಮಕ ವಿಚಾರ ಅಂತಿಮವಾಗಲಿದೆ’ ಎಂದರು ತಿಳಿಸಿದರು.</p>.<p>‘ರಣದೀಪ್ ಸುರ್ಜೆವಾಲಾ ಅವರೊಂದಿಗೆ ಕೆ.ಪಿ.ಸಿ.ಸಿ. ಅಧ್ಯಕ್ಷರ ವಿಚಾರವಾಗಿ ಚರ್ಚೆ ಆಗಿಲ್ಲ. ‘ಸೆಪ್ಟೆಂಬರ್ ಕ್ರಾಂತಿ’ ಬಗ್ಗೆಯೂ ಗೊತ್ತಿಲ್ಲ. ಅದೆನ್ನಲ್ಲ ಸಚಿವ ಕೆ.ಎನ್.ರಾಜಣ್ಣ ಅವರೇ ಹೇಳಬೇಕು’ ಎಂದರು. </p>.<p>‘ಆರ್ಎಸ್ಎಸ್, ಬಿಜೆಪಿ ಇಲ್ಲದಿದ್ದರೆ ಹಿಂದುತ್ವ ಉಳಿಯುತ್ತಿರಲಿಲ್ಲ’ ಎಂಬ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ‘ಆರ್ಎಸ್ಎಸ್ ಇರದ ಕಾಲದಲ್ಲಿ ಹಿಂದೂ ರಾಷ್ಟ್ರ ಇರಲಿಲ್ಲವಾ? ಮತದಾರರನ್ನು ಹೆದರಿಸೋಕೆ ಬಿಜೆಪಿಯವರು ಹೀಗೆಲ್ಲ ಹೇಳುತ್ತಾರೆ’ ಎಂದರು.</p>.<p>‘ಯೂರಿಯಾ ಗೊಬ್ಬರ ಕೊರತೆ ಇದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ ಆಗಿದೆ. ಎರಡೂ ಸರ್ಕಾರಗಳು ಸೇರಿ ಸಮಸ್ಯೆ ಪರಿಹಾರ ಮಾಡಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಮುಂದಿನ ಮುಖ್ಯಮಂತ್ರಿ ಎಂದು ಎಲ್ಲಾ ಕಡೆ ಕೂಗುತ್ತಾರೆ. ಆದರೆ, ಅದಕ್ಕೆ ಗುರು ಬಲ ಕೂಡಿಬರಬೇಕು. ಶನಿ ಆ ಕಡೆಯಿಂದ ಈ ಕಡೆಗೆ ಹೋಗಬೇಕು. ಕೆಪಿಸಿಸಿ ಅಧ್ಯಕ್ಷ ಆಗುವುದಕ್ಕೂ ಬಹಳಷ್ಟು ಜನರು ತಯಾರಿದ್ದಾರೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘30 ವರ್ಷದಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಸುಧಾರಣೆ ಮಾಡಿದ್ದಾರೆ. ಆದರೆ, ಅವರ ವ್ಯಕ್ತಿತ್ವ ಅವರಿಗೆ, ಇವರದ್ದು ಇವರಿಗೆ ಇರುತ್ತದೆ’ ಎಂದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರೆ. ಅಲ್ಲಿ ಏನಾದರೂ ಕೆಲಸ ಇರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅವರೇ ಹೇಳಬೇಕು. ನಿಗಮ–ಮಂಡಳಿಗೆ ನೇಮಕ ವಿಚಾರ ಅಂತಿಮವಾಗಲಿದೆ’ ಎಂದರು ತಿಳಿಸಿದರು.</p>.<p>‘ರಣದೀಪ್ ಸುರ್ಜೆವಾಲಾ ಅವರೊಂದಿಗೆ ಕೆ.ಪಿ.ಸಿ.ಸಿ. ಅಧ್ಯಕ್ಷರ ವಿಚಾರವಾಗಿ ಚರ್ಚೆ ಆಗಿಲ್ಲ. ‘ಸೆಪ್ಟೆಂಬರ್ ಕ್ರಾಂತಿ’ ಬಗ್ಗೆಯೂ ಗೊತ್ತಿಲ್ಲ. ಅದೆನ್ನಲ್ಲ ಸಚಿವ ಕೆ.ಎನ್.ರಾಜಣ್ಣ ಅವರೇ ಹೇಳಬೇಕು’ ಎಂದರು. </p>.<p>‘ಆರ್ಎಸ್ಎಸ್, ಬಿಜೆಪಿ ಇಲ್ಲದಿದ್ದರೆ ಹಿಂದುತ್ವ ಉಳಿಯುತ್ತಿರಲಿಲ್ಲ’ ಎಂಬ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ‘ಆರ್ಎಸ್ಎಸ್ ಇರದ ಕಾಲದಲ್ಲಿ ಹಿಂದೂ ರಾಷ್ಟ್ರ ಇರಲಿಲ್ಲವಾ? ಮತದಾರರನ್ನು ಹೆದರಿಸೋಕೆ ಬಿಜೆಪಿಯವರು ಹೀಗೆಲ್ಲ ಹೇಳುತ್ತಾರೆ’ ಎಂದರು.</p>.<p>‘ಯೂರಿಯಾ ಗೊಬ್ಬರ ಕೊರತೆ ಇದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ ಆಗಿದೆ. ಎರಡೂ ಸರ್ಕಾರಗಳು ಸೇರಿ ಸಮಸ್ಯೆ ಪರಿಹಾರ ಮಾಡಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>